Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷ ಮೈದಾನ ಬಿಟ್ಟು ಓಡಿ ಹೋಗಿದೆ: ಮೋದಿ

ಕಾಂಗ್ರೆಸ್ ಪಕ್ಷ ಮೈದಾನ ಬಿಟ್ಟು ಓಡಿ ಹೋಗಿದೆ: ಮೋದಿ
ಉನಾ(ಹಿಮಾಚಲ ಪ್ರದೇಶ) , ಭಾನುವಾರ, 5 ನವೆಂಬರ್ 2017 (12:24 IST)
ವಿಧಾನಸಭೆ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಪಕ್ಷ ಮೈದಾನ ಬಿಟ್ಟು ಓಡಿ ಹೋಗಿದೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನವೇ ಸೋಲನುಭವಿಸಿದೆ. ಆದ್ದರಿಂದಲೇ ಕಾಂಗ್ರೆಸ್ ನಾಯಕರು ಚುನಾವಣೆ ಪ್ರಚಾರದಿಂದ ದೂರವಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
 
ಕಾಂಗ್ರೆಸ್ ನಾಯಕರು ವ್ಯಾಪಕವಾಗಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಅವರು ಭ್ರಷ್ಟಾಚಾರದಿಂದ ಸಂಪಾದಿಸಿದ ಹಣವನ್ನು ದೇಶಕ್ಕೆ ಮರಳಿ ಕೊಡುವಂತಹ ಕಾನೂನು ಜಾರಿಗೆ ತರುತ್ತೇನೆ ಎಂದರು.
 
ಹಿಮಾಚಲ ಪ್ರದೇಶದಲ್ಲಿ ರೈಲು ವ್ಯವಸ್ಥೆ ಜಾರಿಗೆ ತರುವುದರಿಂದ ರಾಜ್ಯ ಅಭಿವೃದ್ಧಿಯಾಗಲಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯೇ ಬಿಜೆಪಿ ಪಕ್ಷದ ಗುರಿಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪರಿವರ್ತನಾ ಯಾತ್ರೆ ವಿಫಲಕ್ಕೆ ರಾಜ್ಯ ಸರಕಾರ ಷಡ್ಯಂತ್ರ: ಅನಂತಕುಮಾರ ಹೆಗಡೆ