Webdunia - Bharat's app for daily news and videos

Install App

ಮಾಂಸ ತಿನ್ನುವ ವಿಪಕ್ಷಗಳ ನಾಯಕರಿಗೆ ಟಾಂಗ್ ಕೊಟ್ಟ ಮೋದಿ

Krishnaveni K
ಶುಕ್ರವಾರ, 12 ಏಪ್ರಿಲ್ 2024 (16:21 IST)
ಉಧಾಮಪುರ್: ಚೈತ್ರ ನವರಾತ್ರಿ ಮಾಸದಲ್ಲಿ ಮಾಂಸ ತಿಂದು ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಾರೆ ಎಂದು ಪ್ರಧಾನಿ ಮೋದಿ ವಿಪಕ್ಷ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ಇದೀಗ ನವರಾತ್ರಿ ಮಾಸ ನಡೆಯುತ್ತಿದೆ. ಹಿಂದೂಗಳ ಪಾಲಿಗೆ ಇದು ಪವಿತ್ರ ಮಾಸ. ಆದರೆ ಇತ್ತೀಚೆಗೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಮೀನಿನ ಖಾದ್ಯವನ್ನು ಸೇವಿಸುವ ವಿಡಿಯೋವನ್ನು ಬೇಕೆಂದೇ ಹರಿಯಬಿಟ್ಟು ಹಿಂದೂಗಳ ಭಾವನೆ ಧಕ್ಕೆ ತಂದ ಆರೋಪಕ್ಕೊಳಗಾಗಿದ್ದರು.

ಇದೀಗ ಉಧಾಮ್ ಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮೋದಿ ಹಿಂದೂ ಭಾವನೆಗಳಿಗೆ ಧಕ್ಕೆ ತಂದ ವಿಪಕ್ಷ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ನೀವು ಈ ಮೂಲಕ ಯಾರನ್ನು ವ್ಯಂಗ್ಯ ಮಾಡುತ್ತಿದ್ದೀರಿ? ನವರಾತ್ರಿ ದಿನಗಳಲ್ಲಿ ಮಾಂಸಾಹಾರ ತಿನ್ನುವ ವಿಡಿಯೋ ಹಾಕಿ ಜನರ ಭಾವನೆಗೆ ನೋವು ಉಂಟುಮಾಡುತ್ತೀದ್ದೀರಾ? ಯಾರನ್ನು ಮೆಚ್ಚಿಸಲು ಈ ವಿಡಿಯೋ? ಈ ರೀತಿಯ ವಿಡಿಯೋ ಹಾಕಿ ಈ ದೇಶದ ಜನರ ನಂಬಿಕೆ ಮೇಲೆ ದಾಳಿ ಮಾಡುತ್ತಿದ್ದೀರಿ’ ಎಂದು ಮೋದಿ ಟೀಕಾ ಪ್ರಹಾರ ನಡೆಸಿದ್ದಾರೆ.

ತೇಜಸ್ವಿ ಯಾದವ್ ಹೆಸರನ್ನು ನೇರವಾಗಿ ಪ್ರಸ್ತಾಪಿಸದೇ ಇದ್ದರೂ ಮೋದಿ ತೇಜಸ್ವಿಯನ್ನುದ್ದೇಶಿಸಿಯೇ ಈ ಟೀಕೆ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಇತ್ತೀಚೆಗೆ ತೇಜಸ್ವಿ ಯಾದವ್ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡುವಾಗ ಮೀನಿನ ಖಾದ್ಯ ತಿನ್ನುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments