ಕಾಂಗ್ರೆಸ್ ಜೊತೆಗಿದ್ದವರೆಲ್ಲಾ ಓಡಿ ಹೋಗ್ತಿದ್ದಾರೆ: ಮೋದಿ ಟಾಂಗ್

Krishnaveni K
ಗುರುವಾರ, 6 ಫೆಬ್ರವರಿ 2025 (16:41 IST)
ನವದೆಹಲಿ: ಲೋಕಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಜೊತೆಗಿದ್ದವರೆಲ್ಲಾ ಈಗ ಒಬ್ಬೊಬ್ಬಾರಿ ಓಡಿ ಹೋಗ್ತಿದ್ದಾರೆ ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.

ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಮೋದಿ, ವಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಯಾವತ್ತೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ವಿರೋಧಿಸುತ್ತಿತ್ತು. ಅವರನ್ನು ಭಾರತ ರತ್ನಕ್ಕೆ ಪರಿಗಣಿಸಲಿಲ್ಲ. ಅಂಬೇಡ್ಕರ್ ಸೋಲಿಸಲು ಏನೆಲ್ಲಾ ಮಾಡಬಹುದೋ ಮಾಡಿದರು ಎಂದಿದ್ದಾರೆ.

ಕಾಂಗ್ರೆಸ್ ಮಾಡೆಲ್ ಎಂದರೆ ಕುಟುಂಬ ಮೊದಲು ಎಂಬುದಾಗಿದೆ. ನಾವು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಧ್ಯೇಯವನ್ನು ಹೊಂದಿದ್ದೇವೆ. ಇದನ್ನು ಕಾಂಗ್ರೆಸ್ ನಿಂದ ನಿರೀಕ್ಷೆಯನ್ನೂ ಮಾಡಲಾಗದು ಎಂದು ಮೋದಿ ಟಾಂಗ್ ಕೊಟ್ಟಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಜಾತಿ ವಿಷ ಬಿತ್ತುವ ಮೂಲಕ ಧ್ವೇಷ ಸಾಧನೆಯನ್ನು ಹರಡಲು ಪ್ರಯತ್ನ ನಡೆಯುತ್ತಿದೆ. ಒಬಿಸಿ ಸಮಿತಿಗೆ ಸಾಂವಿಧಾನಿಕ ಮಾನ್ಯತೆ ಸಿಗಬೇಕೆಂದು ಒಬಿಸಿ ಪಂಗಡದ ಸಂಸದರು ಕೇಳುತ್ತಲೇ ಇದ್ದಾರೆ. ಬಹುಶಃ ಇದು ಆ ಕಾಲದ ರಾಜಕೀಯಕ್ಕೆ ಹೊಂದಿಕೊಳ್ಳುತ್ತಿರಲಿಲ್ಲ. ಯಾಕೆಂದರೆ ಆಗ ಒಂದು ಕುಟುಂಬವೇ ಎಲ್ಲಕ್ಕಿಂತ ದೊಡ್ಡದಾಗಿತ್ತು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments