ಜಯಲಲಿತಾ ಪಕ್ಷಕ್ಕೆ ಕೈಕೊಟ್ಟು ಕರುಣಾನಿಧಿ ಜತೆ ಕೈ ಜೋಡಿಸಲಿದ್ದಾರಾ ಪ್ರಧಾನಿ ಮೋದಿ?

Webdunia
ಶುಕ್ರವಾರ, 10 ನವೆಂಬರ್ 2017 (08:21 IST)
ಚೆನ್ನೈ: ಪ್ರಧಾನಿ ಮೋದಿ ಕೆಲವೊಂದು ಅನಿರೀಕ್ಷಿತ ನಿರ್ಧಾರಗಳಿಂದಲೇ ರಾಜಕೀಯ ಚದುರಂಗದಾಟವಾಡುವವರು. ಇದೀಗ ತಮಿಳುನಾಡಿನಲ್ಲೂ ತಮ್ಮದೇ ಲೆಕ್ಕಾಚಾರ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

 
ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಮುಖ ಪಕ್ಷವಾಗಿದ್ದ ನಿತೀಶ್ ಕುಮಾರ್ ನೇತೃತ್ವದ ಜೆಡಿಯುವನ್ನು ತನ್ನ ತೆಕ್ಕೆಗೆ ಪಡೆದುಕೊಂಡಂತೆ ತಮಿಳುನಾಡಿನಲ್ಲೂ ಪ್ರಧಾನಿ ಮೋದಿ ಅಣ್ಣಾ ಡಿಎಂಕೆಗೆ ಕೈಕೊಟ್ಟು ಕರುಣಾನಿಧಿ ನೇತೃತ್ವದ ಡಿಎಂಕೆ ಜತೆ ಕೈ ಜೋಡಿಸುವ ಸೂಚನೆ ನೀಡಿದ್ದಾರೆ.

ದಿಡೀರ್ ಆಗಿ ಚೆನ್ನೈನ ಕರುಣಾನಿಧಿ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ತಮ್ಮ ಜತೆ ಕೈ ಜೋಡುವಂತೆ ಕರುಣಾನಿಧಿಗೆ ಆಹ್ವಾನವಿತ್ತಿದ್ದಾರೆ ಎನ್ನಲಾಗಿದೆ. ಇದೀಗ 2 ಜಿ ಹಗರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ತೂಗುಗತ್ತಿ ಎದುರಿಸುತ್ತಿರುವ ಡಿಎಂಕೆಗೂ ಕೇಂದ್ರದ ಬೆಂಬಲ ಬೇಕಾಗಿದೆ.

ಹಾಗೆಯೇ ಬಿಜೆಪಿಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ಬೆಂಬಲ ಅಗತ್ಯವಾಗಿದೆ. ಇದರ ಜತೆಗೆ ಯುಪಿಎ ಮೈತ್ರಿಕೂಟಕ್ಕೆ ದಕ್ಷಿಣದಲ್ಲಿ ಶಾಕ್ ಕೊಡಲು ಪ್ರಧಾನಿ ಮೋದಿ ಯೋಜನೆ ರೂಪಿಸಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಎಲ್ಲಾ ಹಿನ್ನಲೆಯಲ್ಲಿ ಪ್ರಧಾನಿ ಮೋದಿ-ಕರುಣಾನಿಧಿ ಭೇಟಿ ಮಹತ್ವ ಪಡೆದುಕೊಂಡಿದೆ. ಇದೀಗ ಚೆಂಡು ಡಿಎಂಕೆ ನಾಯಕ, ಕರುಣಾನಿಧಿ ಪುತ್ರ ಎಂಕೆ ಸ್ಟಾಲಿನ್ ಅಂಗಳದಲ್ಲಿದೆ. ಒಂದು ವೇಳೆ ಡಿಎಂಕೆ ಬಿಜೆಪಿ ಜತೆ ಕೈಜೋಡಿಸಿದರೆ ಯುಪಿಎಗೆ ದೊಡ್ಡ ಹೊಡೆತವೆಂದೇ ಹೇಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments