Webdunia - Bharat's app for daily news and videos

Install App

ಜಯಲಲಿತಾ ಪಕ್ಷಕ್ಕೆ ಕೈಕೊಟ್ಟು ಕರುಣಾನಿಧಿ ಜತೆ ಕೈ ಜೋಡಿಸಲಿದ್ದಾರಾ ಪ್ರಧಾನಿ ಮೋದಿ?

Webdunia
ಶುಕ್ರವಾರ, 10 ನವೆಂಬರ್ 2017 (08:21 IST)
ಚೆನ್ನೈ: ಪ್ರಧಾನಿ ಮೋದಿ ಕೆಲವೊಂದು ಅನಿರೀಕ್ಷಿತ ನಿರ್ಧಾರಗಳಿಂದಲೇ ರಾಜಕೀಯ ಚದುರಂಗದಾಟವಾಡುವವರು. ಇದೀಗ ತಮಿಳುನಾಡಿನಲ್ಲೂ ತಮ್ಮದೇ ಲೆಕ್ಕಾಚಾರ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

 
ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಮುಖ ಪಕ್ಷವಾಗಿದ್ದ ನಿತೀಶ್ ಕುಮಾರ್ ನೇತೃತ್ವದ ಜೆಡಿಯುವನ್ನು ತನ್ನ ತೆಕ್ಕೆಗೆ ಪಡೆದುಕೊಂಡಂತೆ ತಮಿಳುನಾಡಿನಲ್ಲೂ ಪ್ರಧಾನಿ ಮೋದಿ ಅಣ್ಣಾ ಡಿಎಂಕೆಗೆ ಕೈಕೊಟ್ಟು ಕರುಣಾನಿಧಿ ನೇತೃತ್ವದ ಡಿಎಂಕೆ ಜತೆ ಕೈ ಜೋಡಿಸುವ ಸೂಚನೆ ನೀಡಿದ್ದಾರೆ.

ದಿಡೀರ್ ಆಗಿ ಚೆನ್ನೈನ ಕರುಣಾನಿಧಿ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ತಮ್ಮ ಜತೆ ಕೈ ಜೋಡುವಂತೆ ಕರುಣಾನಿಧಿಗೆ ಆಹ್ವಾನವಿತ್ತಿದ್ದಾರೆ ಎನ್ನಲಾಗಿದೆ. ಇದೀಗ 2 ಜಿ ಹಗರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ತೂಗುಗತ್ತಿ ಎದುರಿಸುತ್ತಿರುವ ಡಿಎಂಕೆಗೂ ಕೇಂದ್ರದ ಬೆಂಬಲ ಬೇಕಾಗಿದೆ.

ಹಾಗೆಯೇ ಬಿಜೆಪಿಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ಬೆಂಬಲ ಅಗತ್ಯವಾಗಿದೆ. ಇದರ ಜತೆಗೆ ಯುಪಿಎ ಮೈತ್ರಿಕೂಟಕ್ಕೆ ದಕ್ಷಿಣದಲ್ಲಿ ಶಾಕ್ ಕೊಡಲು ಪ್ರಧಾನಿ ಮೋದಿ ಯೋಜನೆ ರೂಪಿಸಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಎಲ್ಲಾ ಹಿನ್ನಲೆಯಲ್ಲಿ ಪ್ರಧಾನಿ ಮೋದಿ-ಕರುಣಾನಿಧಿ ಭೇಟಿ ಮಹತ್ವ ಪಡೆದುಕೊಂಡಿದೆ. ಇದೀಗ ಚೆಂಡು ಡಿಎಂಕೆ ನಾಯಕ, ಕರುಣಾನಿಧಿ ಪುತ್ರ ಎಂಕೆ ಸ್ಟಾಲಿನ್ ಅಂಗಳದಲ್ಲಿದೆ. ಒಂದು ವೇಳೆ ಡಿಎಂಕೆ ಬಿಜೆಪಿ ಜತೆ ಕೈಜೋಡಿಸಿದರೆ ಯುಪಿಎಗೆ ದೊಡ್ಡ ಹೊಡೆತವೆಂದೇ ಹೇಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments