Webdunia - Bharat's app for daily news and videos

Install App

ಮೋದಿ ಸಂಪುಟ ಪುನಾರಚನೆ: ಅಸಮರ್ಥ ಸಚಿವರಿಗೆ ಕೊಕ್

Webdunia
ಶುಕ್ರವಾರ, 27 ಮೇ 2016 (19:11 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸಚಿವ ಸಂಪುಟವನ್ನು ಪುನಾರಚಿಸಲಿದ್ದು, ಅಸಮರ್ಥ ಸಚಿವರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಮಣೆಹಾಕಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.  
 
ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, ಶೀಘ್ರದಲ್ಲಿಯೇ ಮೋದಿ ಸಂಪುಟ ಪುನಾರಚನೆಯಾಗಲಿದೆ. ಸಂಪುಟ ಪುನಾರಚನೆಯ ಬಗ್ಗೆ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ವರ್ಷಗಳ ಅಧಿಕಾರವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ಸಂಪುಟ ಪುನಾರಚನೆಯ ಸುದ್ದಿ ಬಹಿರಂಗವಾಗಿರುವುದು ಸಚಿವರಲ್ಲಿ ತಳಮಳ ಮೂಡಿಸಿದೆ.
 
ಪಕ್ಷದ ವರದಿಗಳ ಪ್ರಕಾರ, ಮೋದಿ ಸರಕಾರದಲ್ಲಿ ಅಸಮರ್ಥರಾಗಿರುವ ಸಚಿವರಿಗೆ ಕೊಕ್ ನೀಡಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. 
 
ಬಹುತೇಕ ಮುಂಬರುವ ಜೂನ್ ತಿಂಗಳ ಮೊದಲ ವಾರದಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
 
ಸರ್ಬಾನಂದ್ ಸೋನೋವಾಲ್ ಆಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿದ್ದರಿಂದ ಅವರು ನಿರ್ವಹಿಸುತ್ತಿದ್ದ ಕ್ರೀಡಾ ಸಚಿವ ಸ್ಥಾನ ಪ್ರಸ್ತುತ ಖಾಲಿಯಾಗಿ ಉಳಿದಿದೆ. ಕ್ರೀಡಾ ಸಚಿವ ಸ್ಥಾನಕ್ಕೆ ಸೂಕ್ತರು ಯಾರು ಎನ್ನುವ ಬಗ್ಗೆ ಮೋದಿ ಸರಕಾರ ಚಿಂತನೆ ನಡೆಸಿದೆ. 
 
ಹಿರಿಯ ಬಿಜೆಪಿ ನಾಯಕರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್ ಮತ್ತು ನಿತೀನ್ ಗಡ್ಕರಿ ತಮ್ಮ ಖಾತೆಗಳಲ್ಲಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ.
 
ಅಸಮರ್ಥ ಸಚಿವರಿಂದಾಗಿ ಕೆಲ ಕಾರ್ಯಗಳು ನೆನೆಗುದಿಗೆ ಬಿದ್ದಿದ್ದರಿಂದ ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡಿ ವೇಗದ ಚಾಲನೆ ನೀಡಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಪಿ ಯೋಗೇಶ್ವರ್ ಫ್ಯಾಮಿಲಿ ಮ್ಯಾಟರ್: ರಣದೀಪ್ ಸುರ್ಜೇವಾಲಗೆ ದೂರು ಕೊಟ್ಟ ಪತ್ನಿ

ರಾಜಸ್ಥಾನದ ಚುರುವಿನಲ್ಲಿ ವಾಯುಪಡೆಯ ಜಾಗ್ವಾರ್ ಫೈಟರ್ ಪತನ: ಪೈಲಟ್ ಸಾವು

ಗುಜರಾತ್‌: ಸೇತುವೆ ಮುರಿದು ನದಿಗೆ ಬಿದ್ದ ವಾಹನಗಳು, 9ಮಂದಿ ಸಾವು

ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನಮ್ಮ ಪಕ್ಷದ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಬಿಕೆ ಹರಿಪ್ರಸಾದ್ ಗೆ ಟಾಂಗ್ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments