Publish Date: Mon, 06 May 2019 (08:32 IST)
Updated Date: Mon, 06 May 2019 (08:33 IST)
ನವದೆಹಲಿ: ಒಡಿಶಾ ಮತ್ತು ಪ.ಬಂಗಾಲದಲ್ಲಿ ಜನಜೀವನ ಅಲ್ಲೋಲಕಲ್ಲೋಲ ಮಾಡಿದ ಫೋನಿ ಚಂಡಮಾರುತ ಪೀಡಿತ ಪ್ರದೇಶಕ್ಕೆ ಇಂದು ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
ಒಡಿಶಾದಲ್ಲಿ ಹಾನಿಗೀಡಾದ ಪ್ರದೇಶಗಳಲ್ಲಿ ಪ್ರಧಾನಿ ಮೋದಿ ಸಮೀಕ್ಷೆ ನಡೆಸಲಿದ್ದಾರೆ. ಒಡಿಶಾದ ಬಿಜು ಪಟ್ನಾಯಿಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿ ಬಳಿಕ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಬಳಿಕ ವಿಮಾನ ನಿಲ್ದಾಣದಲ್ಲಿಯೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಾನಿಗೀಡಾದ ಪ್ರದೇಶಗಳ ಪುನರ್ವಸತಿ ಕಾರ್ಯದ ಕುರಿತು ಚರ್ಚೆ ನಡೆಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ