Webdunia - Bharat's app for daily news and videos

Install App

ಇಂದು ಉತ್ತರಾಖಂಡ್ಗೆ ಪ್ರಧಾನಿ ಮೋದಿ ಭೇಟಿ

Webdunia
ಗುರುವಾರ, 7 ಅಕ್ಟೋಬರ್ 2021 (13:41 IST)
ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರಾಖಂಡ್ಗೆ ಭೇಟಿ ನೀಡಲಿದ್ದು, ಪಿಎಂ ಕೇರ್ಸ್ ನಿಧಿಯಿಂದ ನಿರ್ಮಾಣ ಮಾಡಲಾಗಿರುವ 35 ಪ್ರೆಶರ್ ಸ್ವಿಂಗ್ ಹೀರಿಕೊಳ್ಳುವಿಕೆಯ ಆಮ್ಲಜನಕ ಸ್ಥಾವರಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಈ ಕಾರ್ಯಕ್ರಮ ರಿಶಿಕೇಶದಲ್ಲಿರುವ ಏಮ್ಸ್ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದೆ. 
ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ನಿನ್ನೆ ಟ್ವೀಟ್ ಮಾಡಿದ್ದರು. ನಾನು ನಾಳೆ (ಅಕ್ಟೋಬರ್ 7) ದೇವಭೂಮಿ ಉತ್ತರಾಖಂಡ್ಗೆ ತೆರಳುತ್ತಿದ್ದೇನೆ. ಅಲ್ಲಿ ನಡೆಯಲಿರುವ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ 35 ಪಿಎಸ್ಎ ಆಕ್ಸಿಜನ್ ಸ್ಥಾವರಗಳನ್ನು ಲೋಕಾರ್ಪಣೆ ಮಾಡಲಾಗುವುದು. ಇದೊಂದು ಪ್ರಮುಖ ಆರೋಗ್ಯ ಸೌಕರ್ಯವಾಗಿದ್ದು, ಹೆಚ್ಚಿನ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದಿದ್ದರು.
2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ಗೆ ಭೇಟಿ ನೀಡಿದ ಮೇಲೆ ಮತ್ತೆ ಆಗಮಿಸಿರಲಿಲ್ಲ. ಮುಂದಿನ ವರ್ಷ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ದೃಷ್ಟಿಯಿಂದ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದೆ. ಅಂದಹಾಗೆ ಇಂದಿನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಜತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಉತ್ತರಾಖಂಡ ರಾಜ್ಯಪಾಲ ಗುರ್ಮಿತ್ ಸಿಂಗ್, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಕೂಡ ಭಾಗವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಕಬಿನಿ ಭರ್ತಿಯಾಗುತ್ತಿದ್ದರಿಂದ, ನಾವ್ಯಾರು ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌

ಮಳೆಯಿಂದಾಗಿ ರೈಲ್ವೆ ಹಳಿಗೆ ಗುಡ್ಡಕುಸಿತ: ಕಾನ್‌ಸ್ಟೇಬಲ್‌ ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ಅತಂತ್ರ

ಮಲೆನಾಡಿನಲ್ಲಿ ಮುಂದುವರಿದ ವರುಣಾರ್ಭಟ: ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮುಂದಿನ ಸುದ್ದಿ
Show comments