Webdunia - Bharat's app for daily news and videos

Install App

ದೂರದ ಬಹರೈನ್ ನಲ್ಲೇ ಅರುಣ್ ಜೇಟ್ಲಿ ನೆನೆದು ದುಃಖಿಸಿದ ಪ್ರಧಾನಿ ಮೋದಿ

Webdunia
ಭಾನುವಾರ, 25 ಆಗಸ್ಟ್ 2019 (12:32 IST)
ನವದೆಹಲಿ: ಒಂದೆಡೆ ಕರ್ತವ್ಯ, ಇನ್ನೊಂದೆಡೆ ಗೆಳೆಯನ ಸಾವು.. ಇದೆರಡರ ಮಧ್ಯೆ ಪ್ರಧಾನಿ ಮೋದಿ ಕೊಂಚ ಭಾವುಕರಾಗಿದ್ದಾರೆ. ಬಹರೈನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಗೆಳೆಯ ಅರುಣ್ ಜೇಟ್ಲಿ ನೆನೆದು ದುಃಖ ಪಟ್ಟಿದ್ದಾರೆ.


ಬಹರೈನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ನಾನು ಇಲ್ಲಿ ಬಹರೈನ್ ಗೆ ಬಂದಿದ್ದೇನೆಂದರೆ ಯೋಚಿಸಲೂ ಆಗುತ್ತಿಲ್ಲ. ಇನ್ನೊಂದೆಡೆ ನನ್ನ ಗೆಳೆಯ ಅರುಣ್ ಇನ್ನಿಲ್ಲವಾಗಿದ್ದಾನೆ. ಕೆಲವು ದಿನಗಳ ಹಿಂದೆ ನಮ್ಮ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರನ್ನು ಕಳೆದುಕೊಂಡಿದ್ದೆವು. ಇಂದು ನನ್ನ ಗೆಳೆಯ  ಅರುಣ್ ಹೋಗಿದ್ದಾನೆ. ಅವನು ನನಗೆ ಪ್ರತೀ ಹಂತದಲ್ಲೂ ಬೆಂಬಲವಾಗಿ ನಿಂತ ಗೆಳೆಯ’ ಎಂದು ಪ್ರಧಾನಿ ಮೋದಿ ಭಾವುಕರಾಗಿ ಹೇಳಿದ್ದಾರೆ.

ಅರುಣ‍್ ಜೇಟ್ಲಿ ಅಂತಿಮ ದರ್ಶನ ಪಡೆದ ಬಳಿಕ ಪ್ರಧಾನಿ ಮೋದಿ ಬಹರೈನ್ ಗೆ ತೆರಳಿದ್ದರು. ಸ್ವತಃ ಅರುಣ್ ಜೇಟ್ಲಿ ಕುಟುಂಬವೇ ಪ್ರವಾಸ ರದ್ದುಗೊಳಿಸದಿರಲು ಪ್ರಧಾನಿ ಮೋದಿಗೆ ಮನವಿ ಮಾಡಿತ್ತು. ಹೀಗಾಗಿ ಇಂದು ನಡೆಯಲಿರುವ ಅರುಣ್ ಜೇಟ್ಲಿ ಅಂತ್ಯ ಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments