ಧ್ಯಾನಕ್ಕಾಗಿ ಕನ್ಯಾಕುಮಾರಿಗೆ ನಾಳೆ ಪ್ರಧಾನಿ ಮೋದಿ ಭೇಟಿ: 2000ಕ್ಕೂ ಅಧಿಕ ಪೊಲೀಸರಿಂದ ಬಿಗಿ ಭದ್ರತೆ

sampriya
ಬುಧವಾರ, 29 ಮೇ 2024 (17:48 IST)
ತಮಿಳುನಾಡು: ಇಲ್ಲಿರುವ ವಿವೇಕಾನಂದ ಶಿಲಾ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.  

ಕನ್ಯಾಕುಮಾರಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಅಂತರರಾಷ್ಟ್ರೀಯ ಪ್ರವಾಸಿ ತಾಣವೂ ಆಗಿರುವ ಇಲ್ಲಿಗೆ 2,000 ಪೊಲೀಸರನ್ನು ನಿಯೋಜಿಸಲಾಗಿದೆ.

ಲೋಕಸಭಾ ಚುನಾವಣೆಯ ಏಳನೇ ಹಾಗೂ ಕೊನೆಯ ಹಂತದ ಮತದಾನದ ಜೂನ್‌ 1ರಂದು ನಡೆಯಲಿದೆ. ಜೂನ್‌ 30 ಸಂಜೆಗೆ ಬಹಿರಂಗ ಮತಬೇಟೆ ಮುಕ್ತಾಯವಾಗಲಿದೆ. ಹೀಗಾಗಿ, ಮೋದಿ ಅವರು ಮೇ 30ರ ಸಂಜೆಯಿಂದ ಜೂನ್‌ 1ರ ಸಂಜೆಯವರೆಗೆ ಸ್ಮಾರಕದ 'ಧ್ಯಾನ ಮಂಟಪಂ'ನಲ್ಲಿ ಧ್ಯಾನ ಮಾಡಲಿದ್ದಾರೆ.

ತಿರುನಲ್ವೇಲಿ ವಲಯದ ಡಿಐಜಿ ಪ್ರವೇಶ್‌ ಕುಮಾರ್‌ ಹಾಗೂ ಕನ್ಯಾಕುಮಾರಿ ಎಸ್‌ಪಿ ಇ. ಸುಂದರವದನಂ ಅವರು ಸ್ಮಾರಕ, ಬೋಟ್‌ಗಳು ನಿಲ್ಲುವ ಸ್ಥಳ, ಹೆಲಿಪ್ಯಾಡ್‌ ಹಾಗೂ ಅತಿಥಿ ಗೃಹದಲ್ಲಿ ಭದ್ರತಾ ತಪಾಸಣೆ ನಡೆಸಿದ್ದಾರೆ. ಪ್ರಧಾನಿಯವರ ಭದ್ರತಾ ತಂಡವೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಪ್ರಧಾನಿ ಅವರು 45 ನಿಮಿಷ ಧ್ಯಾನ ಮಾಡಲಿದ್ದು, ಕರಾವಳಿ ಭದ್ರತಾ ಪಡೆ, ಭಾರತೀಯ ಕರಾವಳಿ ಕಾವಲುಪಡೆ ಮತ್ತು ನೌಕಾಪಡೆ ಸಾಗರ ಗಡಿಯಲ್ಲಿ ಕಣ್ಗಾವಲು ವಹಿಸಲಿದೆ. ಜೂನ್‌ 1ರವರೆಗೆ ಅವರು ಇಲ್ಲಿಯೇ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments