ಮೋದಿ ಶಾರುಕ್ ಖಾನ್ ಆಗಲು ಹೊರಟಿದ್ದರು, ಆದ್ರೆ ಗಬ್ಬರ್ ಸಿಂಗ್ ಆಗಿದ್ದಾರೆ: ರಾಹುಲ್ ಗಾಂಧಿ

Webdunia
ಶುಕ್ರವಾರ, 17 ಫೆಬ್ರವರಿ 2017 (16:31 IST)
ಪ್ರಧಾನಿ ನರೇಂದ್ರ ಮೋದಿಯವರ ಅಚ್ಚೇ ದಿನ್ ಎಲ್ಲಿದೆ? ಶಾರುಕ್ ಖಾನ್ ಆಗಲು ಹೊರಟಿದ್ದವರು ಗಬ್ಬರ್ ಸಿಂಗ್ ಆಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 
ರಾಯಬರೇಲಿಯ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ರಾಹುಲ್,  ಪ್ರಧಾನಿ ಮೋದಿಗೆ ಶ್ರೀಮಂತರ ಸಾಲವನ್ನು ಮನ್ನಾ ಮಾಡಲು ಸಮಯವಿದೆ. ಆದರೆ, ಬಡವರ, ಹಿಂದುಳಿದವರ, ಶೋಷಿತರ ಸಾಲವನ್ನು ಮನ್ನಾ ಮಾಡಲು ಅವರಿಗೆ ಸಮಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಯುಪಿಎ ಸರಕಾರ ರಾಯಬರೇಲಿ ಜಿಲ್ಲೆಯಲ್ಲಿ ಫುಡ್ ಪಾರ್ಕ್ ಮತ್ತು ರೈಲ್ವೆ ಬೋಗಿ ನಿರ್ಮಾಣ ಘಟಕ ನೀಡಿತ್ತು. ಆದರೆ, ಕೇವಲ ರಾಜಕೀಯ ಸೇಡಿಗಾಗಿ ಪ್ರಧಾನಿ ಮೋದಿ ಇತರ ಜಿಲ್ಲೆಗೆ ವರ್ಗಾಯಿಸಿದ್ದಾರೆ ಎಂದು ಕಿಡಿಕಾರಿದರು.
 
ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಮೂರು ವರ್ಷಗಳ ಅವಧಿಯಲ್ಲಿ ಒಬ್ಬನೇ ಒಬ್ಬ ಯುವಕನಿಗೆ ಉದ್ಯೋಗ ಕೊಡಿಸಿಲ್ಲ ಎಂದು ಬಿಜೆಪಿ ನಾಯಕರೇ ಹೇಳಿದ್ದಾರೆ. ಕ್ಷೇತ್ರದಲ್ಲಿ ಫುಡ್ ಪಾರ್ಕ್ ಮತ್ತು ರೈಲ್ವೆ ನಿರ್ಮಾಣ ಘಟಕಕ್ಕೆ ಚಾಲನೇ ನೀಡಿದ್ದಲ್ಲಿ ಸಾವಿರಾರು ಯುವಕರಿಗೆ ಉದ್ಯೋಗ ದೊರಕುತ್ತಿತ್ತು ಎಂದು  ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತಿರುಗೇಟು ನೀಡಿದರು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments