Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಹೈಲೈಟ್ ಏನು?

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ  ಭಾಷಣದ ಹೈಲೈಟ್ ಏನು?
ನವದೆಹಲಿ , ಮಂಗಳವಾರ, 15 ಆಗಸ್ಟ್ 2017 (09:27 IST)
ನವದೆಹಲಿ: 71 ನೇ ಸ್ವಾತಂತ್ಸ್ಯೋತ್ಸವದ ಅಂಗವಾಗಿ ದೆಹಲಿಯಲ್ಲಿ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು.

 
ನಂತರ ಮಾತನಾಡಿದ ಪ್ರಧಾನಿ ಮೋದಿ ಒಗ್ಗಟ್ಟಾಗಿ ದೇಶದ ಏಳಿಗೆಗಾಗಿ ಕೆಲಸ ಮಾಡೋಣ ಎಂದರು. ತಮ್ಮ ಭಾಷಣದಲ್ಲಿ ಗಡಿಯಲ್ಲಿ ತಗಾದೆ ತೆಗೆಯುತ್ತಿರುವ ಪಾಕಿಸ್ತಾನ, ಚೀನಾಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

ಸಮುದ್ರ ಭಾಗವಿರಲಿ, ಗಡಿಯಿರಲಿ, ಭಾರತ ತನ್ನನ್ನು ರಕ್ಷಿಸಿಕೊಳ್ಳಲು ಸಮರ್ಥವಾಗಿದೆ ಎಂದರು. ಅಲ್ಲದೆ ಜಮ್ಮು ಕಾಶ್ಮೀರದ ಸಮಸ್ಯೆಗೆ ಅಭಿವೃದ್ಧಿಯೇ ಪರಿಹಾರ ಎಂದರು. ಅಲ್ಲದೆ, ನಂಬಿಕೆಗಳ ಹೆಸರಿನಲ್ಲಿ ಹಿಂಸೆ ಸಹಿಸುವುದಿಲ್ಲ ಎಂದು ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಇದಲ್ಲದೆ, ತಮ್ಮ ಭಾಷಣದಲ್ಲಿ ಜಿಎಸ್ ಟಿ ಖಾಯಿದೆ, ನೋಟು ನಿಷೇಧದ ಲಾಭಗಳ ಕುರಿತು ಬೆಳಕು ಚೆಲ್ಲಿದರು.

ಇದನ್ನೂ ಓದಿ.. ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಿದ ಮಕ್ಕಳ ಸೈನ್ಯ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಿದ ಮಕ್ಕಳ ಸೈನ್ಯ!