Webdunia - Bharat's app for daily news and videos

Install App

ಪ್ರಧಾನಿ ಮೋದಿ ಕುಂಭಕರ್ಣನಂತೆ ನಿದ್ರಾವಸ್ಥೆಯಲ್ಲಿದ್ದಾರೆ: ಮಾಯಾವತಿ

Webdunia
ಮಂಗಳವಾರ, 9 ಆಗಸ್ಟ್ 2016 (12:39 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ಎರಡು ವರ್ಷಗಳಿಂದ ಕುಂಭಕರ್ಣನಂತೆ ನಿದ್ರಾವಸ್ಥೆಯಲ್ಲಿದ್ದು, ಇದೀಗ ಉತ್ತರಪ್ರದೇಶ ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ದಲಿತರ ಪರ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಆರೋಪಿಸಿದ್ದಾರೆ.
 
ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯ ನಡೆದರೂ ಯಾವುದೇ ಹೇಳಿಕೆ ನೀಡದ ಮೋದಿ ಇದೀಗ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ಗೋರಕ್ಷಣೆ ನೆಪದಲ್ಲಿ ದಲಿತರ ಮೇಲೆ ಪ್ರತಿನಿತ್ಯ ದೌರ್ಜನ್ಯಗಳು ನಡೆಯುತ್ತಿವೆ. ಆದರೆ, ದಲಿತರಿಗೆ ಯಾವುದೇ ರಕ್ಷಣೆ ದೊರೆಯುತ್ತಿಲ್ಲ. ಪ್ರಧಾನಿ ಮೋದಿ ಸರಕಾರದಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಗುಡುಗಿದ್ದಾರೆ.
 
ಗುಜರಾತ್‌ನಲ್ಲಿ ಮುಂದಿನ ವರ್ಷ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಉನಾ ಜಿಲ್ಲೆಯಲ್ಲಿ ನಡೆದ ದಲಿತರ ಮೇಲಿನ ಹಲ್ಲೆಯಲ್ಲಿ ಖಂಡಿಸಿರುವ ಮೋದಿ, ದಲಿತರ ಮೇಲೆ ಹಲ್ಲೆ ನಡೆಸುವ ವ್ಯಕ್ತಿಗಳು ದೇಶದ್ರೋಹಿಗಳು ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments