ಅಯೋಧ್ಯೆ ರಾಮನ ಹಣೆಗೆ ಸೂರ್ಯ ತಿಲಕ ಸ್ಪರ್ಶಿಸುವುದನ್ನು ಹೆಲಿಕಾಪ್ಟರ್ ನಲ್ಲಿ ವೀಕ್ಷಿಸಿದ ಪ್ರಧಾನಿ ಮೋದಿ

Krishnaveni K
ಬುಧವಾರ, 17 ಏಪ್ರಿಲ್ 2024 (13:38 IST)
Photo Courtesy: Twitter
ನವದೆಹಲಿ: ಇಂದು ರಾಮನವಮಿ ನಿಮಿತ್ತ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಹಣೆಗೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ಈ ದೃಶ್ಯಾವಳಿಯನ್ನು ಪ್ರಧಾನಿ ಮೋದಿ ಕೂಡಾ ಲೈವ್ ಆಗಿ ವೀಕ್ಷಿಸಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿಯಲ್ಲಿ ರಾಮಮಂದಿರವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಲೋಕಾರ್ಪಣೆಗೊಳಿಸಲಾಗಿತ್ತು. ಈ ವೇಳೆ ಇನ್ನು ಮುಂದೆ ಪ್ರತೀ ವರ್ಷ ರಾಮನವಮಿಯಂದು ಬಾಲರಾಮನ ಹಣೆಗೆ ಸೂರ್ಯ ತಿಲಕ ಸ್ಪರ್ಶಿಸಲಿದೆ ಎಂದು ಘೋಷಣೆ ಮಾಡಲಾಗಿತ್ತು.

ಆಧುನಿಕ ವಾಸ್ತು ಶಿಲ್ಪ ತಂತ್ರಜ್ಞಾನ ಬಳಸಿ ಸೂರ್ಯ ರಶ್ಮಿ ರಾಮನ ಹಣೆಗೆ ಬೀಳುವಂತೆ ಮಾಡಲಾಗಿದೆ. ಇಂದು ಈ ಅಪರೂಪದ ವಿದ್ಯಮಾನಕ್ಕೆ ದೇಶವಿಡೀ ಸಾಕ್ಷಿಯಾಗಿತ್ತು. ದೂರದರ್ಶನದಲ್ಲಿ ಈ ದೃಶ್ಯದ ನೇರಪ್ರಸಾರ ಮಾಡಲಾಗಿತ್ತು. ಹೀಗಾಗಿ ಕೋಟ್ಯಾಂತರ ಮಂದಿ ಇದನ್ನು ವೀಕ್ಷಿಸಿದ್ದರು.

ಪ್ರಧಾನಿ ಮೋದಿ ಇದೀಗ ಚುನಾವಣೆ ಪ್ರಚಾರ ನಿಮಿತ್ತ ಬ್ಯುಸಿ ಓಡಾಟದ ನಡುವೆಯೂ ಈ ದೃಶ್ಯಾವಳಿಯನ್ನು ಲೈವ್ ಆಗಿ ವೀಕ್ಷಿಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡುತ್ತಿರುವಾಗ ಟ್ಯಾಬ್ ನಲ್ಲಿ ಲೈವ್ ಆಗಿ ಸೂರ್ಯ ತಿಲಕ ವಿದ್ಯಮಾನ ವೀಕ್ಷಿಸಿದ್ದಾರೆ. ಇದು ನನಗೆ ಅತೀವ ಭಾವುಕ ಕ್ಷಣವಾಗಿತ್ತು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments