Webdunia - Bharat's app for daily news and videos

Install App

ಮೋದಿ, ನೋಟು ನಿಷೇಧ, ಜಿಎಸ್‌ಟಿ ದುರಂತವೆಂದು ಒಪ್ಪಿಕೊಳ್ಳಲಿ: ರಾಹುಲ್ ಗಾಂಧಿ

Webdunia
ಸೋಮವಾರ, 30 ಅಕ್ಟೋಬರ್ 2017 (18:10 IST)
ಕೇಂದ್ರ ಸರಕಾರದ ನೋಟು ನಿ|ಷೇಧ ಮತ್ತು ಜಿಎಸ್‌ಟಿ ಜಾರಿಯಂತಹ ಅವಳಿ ತೀರ್ಮಾನಗಳು ದೇಶದ ಆರ್ಥಿಕತೆಯನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಕಳೆದ  ವರ್ಷದ ನವೆಂಬರ್‌ 8 ರಂದು ಜಾರಿಗೊಳಿಸಿದ ನೋಟು ನಿಷೇಧ ದಿನವನ್ನು ಕಪ್ಪು ಹಣ ವಿರೋಧಿ ದಿನವನ್ನಾಗಿ ಆಚರಿಸುವ ಬಿಜೆಪಿ ನಿರ್ಧಾರದ ವಿರುದ್ಧ ಗುಡುಗಿರುವ ಅವರು, ಮೊದ್ಲು ನೋಟು ನಿಷೇಧ ದುರಂತವೆಂದು ಒಪ್ಪಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.  
 
ನವೆಂಬರ್ 8 ದೇಶಕ್ಕೆ ಅತ್ಯಂತ ನಿರಾಶೆಯ ದಿನ. ಆದರೆ, ಬಿಜೆಪಿಯವರು ನವೆಂಬರ್ 8 ರಂದು ಕಪ್ಪು ಹಣ ವಿರೋಧಿ ದಿನವನ್ನಾಗಿ ಆಚರಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಅವರು ಸಂಭ್ರಮ ಆಚರಿಸಲು ನನಗಂತೂ ಯಾವ ಕಾರಣಗಳು ಕಾಣುತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ.
 
ದೇಶದಲ್ಲಿರುವ ಬಡವರು, ಶೋಷಿತರು, ದುರ್ಬಲರು ಎಂತಹ ಕಷ್ಟಗಳಿಂದ ಸಾಗುತ್ತಿದ್ದಾರೆ ಎನ್ನುವ ನೋವು ಅರಿಯುವಲ್ಲಿ ಪ್ರಧಾನಿ ಮೋದಿ ವಿಫಲವಾಗಿದ್ದಾರೆ. ಮೋದಿ ಇಲ್ಲಿಯವರೆಗೆ ನೋಟು ನಿಷೇಧ ದುರಂತವೆಂದು ಒಪ್ಪಿಕೊಳ್ಳಲು ಸಿದ್ದರಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments