Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲಿ: ಇಂತಹ ಭ್ರಷ್ಟರಿಗೆ ಅವಕಾಶ ಕೊಡ್ತೀರಾ ಎಂದು ಕುಹುಕವಾಡಿದ ಪ್ರಧಾನಿ ಮೋದಿ

Krishnaveni K
ಬುಧವಾರ, 25 ಸೆಪ್ಟಂಬರ್ 2024 (16:23 IST)
ಹರ್ಯಾಣ: ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹರ್ಯಾಣ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಹೇಳಿಕೆ ನೀಡಿದ್ದಾರೆ.

ಸೋನಿಪತ್ ನಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ. ಹೀಗಾಗಿ ತನಿಖೆ ನಡೆಯಬೇಕು ಎಂದಿದ್ದಾರೆ. ಕಾಂಗ್ರೆಸ್ ಆಡಳಿತದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ. ಹೈಕಮಾಂಡ್ ನವರೇ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವಾಗ ಕೆಳಗೆ ಇರುವ ನಾಯಕರಿಗೂ ಲೂಟಿ ಮಾಡಲು ಲೈಸೆನ್ಸ್ ಸಿಕ್ಕಂತಾಗುತ್ತದೆ ಎಂದು ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 2 ವರ್ಷವಾಗಿದೆ. ಅಲ್ಲಿ ಯಾವ ಸ್ಥಿತಿ ನಿರ್ಮಾಣವಾಗಿದೆಯೆಂದರೆ ಮುಖ್ಯಮಂತ್ರಿ ವಿರುದ್ಧವೇ ಭೂಹಗರಣ ಆರೋಪ ಬಂದಿದೆ. ಸ್ವತಃ ಹೈಕೋರ್ಟ್ ತನಿಖೆಗೆ ಆದೇಶಿಸಿ ಛಾಟಿ ಬೀಸಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೇ ಸಿದ್ದರಾಮಯ್ಯ ಹೈಕೋರ್ಟ್ ಗೆ ಹೋದರು. ಆದರೆ ಹೈಕೋರ್ಟ್ ಸರಿಯಾಗಿಯೇ ಪೆಟ್ಟು ನೀಡಿದೆ. ಇಂತಹ ಭ್ರಷ್ಟಾಚಾರಿಗಳಿಗೆ ಹರ್ಯಾಣದಲ್ಲೂ ಅವಕಾಶ ಕೊಡ್ತೀರಾ ಎಂದು ಪ್ರಧಾನಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments