Webdunia - Bharat's app for daily news and videos

Install App

'ಕೈ' ಮುಳುಗುತ್ತಿರುವ ಹಡಗು: ಮೋದಿ

Webdunia
ಶುಕ್ರವಾರ, 27 ಜನವರಿ 2017 (16:47 IST)
ಪಂಜಾಬ್‌ನಲ್ಲಿ ಚುನಾವಣಾ ಕಣ ರಂಗೇರಿದ್ದು ಇಂದು ಪ್ರಧಾನಿ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ  ರಾಹುಲ್ ಗಾಂಧಿ ಮತ್ತು ಆಪ್ ನಾಯಕ ಅರವಿಂದ ಕೇಜ್ರಿವಾಲ್ ಬಿರುಸಿನ ಪ್ರಚಾರವನ್ನು ನಡೆಸಿದ್ದಾರೆ. 

 
ಜಲಂಧರ್‌ನಲ್ಲಿ ಕೈ, ಕೇಜ್ರಿವಾಲ್ ಮತ್ತು ಕಾಂಗ್ರೆಸ್ ಸೇರಿರುವ ನವಜೋತ್ ಸಿಂಗ್ ಸಿಧು ವಿರುದ್ಧ ಹರಿಹಾಯ್ದ ಮೋದಿ, ಪಂಜಾಬ್‌ನಲ್ಲಿ ಕಾಂಗ್ರೆಸ್ ನೆಲ ಕಚ್ಚಿದ್ದು ಮುಳುಗುವ ಹಡಗಂತಾಗಿದೆ. ಸಂಪೂರ್ಣ ಹತಾಶ ಸ್ಥಿತಿಯಲ್ಲಿರುವ 'ಕೈ' ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುತ್ತಿದೆ ಎಂದು ಟೀಕಿಸಿದ್ದಾರೆ.
 
ಕೆಲ ರಾಜಕಾರಣಿಗಳು ರಾಜ್ಯದ ಯುವಕರ ದಾರಿ ತಪ್ಪಿಸುತ್ತಿದ್ದಾರೆ ಎಂದವರು ಆರೋಪಿಸಿದ್ದಾರೆ. 
 
ತಮ್ಮ ಮಿತ್ರ ಪಕ್ಷ ಅಕಾಲಿ ದಳದ ನಾಯಕ ಮತ್ತು ಮುಖ್ಯಮಂತ್ರಿ ಪ್ರಕಾಶ ಸಿಂಗ್ ಬಾದಲ್ ಅವರನ್ನು ಹಾಡಿಹೊಗಳಿದ ಅವರು, ಬಾದಲ್ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹೀಗಾಗಿ ಮತ್ತೆ ಅಧಿಕಾರದ ಗದ್ದುಗೆಯನ್ನೇರಲಿದ್ದಾರೆ ಎಂದು ಹೇಳಿದ್ದಾರೆ. 
 
ಕೆಲವರು ರಾಜಕೀಯ ಲಾಭಕ್ಕಾಗಿ ಪಂಜಾಬ್‌ನ ಹೆಸರನ್ನು ಕೆಡಿಸುತ್ತಿದ್ದಾರೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
 
ಇಂದು ಬೆಳಿಗ್ಗೆ ರಾಹುಲ್‌ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿರುವ ಮೋದಿ, ‘ರಾಜಕೀಯ ಲಾಭಕ್ಕಾಗಿ ಪಂಜಾಬ್‌ಗೆ ಕೆಟ್ಟ ಹೆಸರು ತರುವವರಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಬೇಕು’ ಎಂದು ಹೇಳಿದ್ದಾರೆ.
 
ಮಜಿಥಾದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, ‘ನಾಲ್ಕು ವರ್ಷಗಳ ಹಿಂದೆ ಪಂಜಾಬ್‌ನಲ್ಲಿ ಶೇಕಡ 70ರಷ್ಟು ಯುವಜನರು ಮಾದಕ ವ್ಯಸನಿಗಳಾಗಿದ್ದರು’ ಎಂದು ಹೇಳಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಮುಂದಿನ ಸುದ್ದಿ