ಕರ್ನಾಟಕ ನೈಋತ್ಯ ರೈಲ್ವೇ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

Krishnaveni K
ಸೋಮವಾರ, 26 ಫೆಬ್ರವರಿ 2024 (13:44 IST)
Photo Courtesy: Twitter
ನವದೆಹಲಿ: ಕರ್ನಾಟಕದ ನೈಋತ್ಯ ವಲಯದ ರೈಲು ಹಳಿ ಮೇಲ್ದರ್ಜೆಗೇರಿಸುವ ನೂತನ ಯೋಜನೆಗಳಿಗೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

15 ರೈಲ್ವೇ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಇಂದು ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಅಮೃತ ಭಾರತ ನಿಲ್ದಾಣ ಯೋಜನೆಯಡಿ ಸುಮಾರು 372,13 ಕೋಟಿ ರೂ. ವೆಚ್ಚದಲ್ಲಿ 15 ರೈಲ್ವೇ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ.

ನೈಋತ್ಯ ರೈಲ್ವೇ ವ್ಯಾಪ್ತಿಯ ಕರ್ನಾಟಕದ ಕೆಂಗೇರಿ(21 ಕೋಟಿ), ಕೆಆರ್ ಪುರಂ (21.1 ಕೋಟಿ), ಬಂಗಾರಪೇಟೆ(21.5ಕೋಟಿ),  ಚನ್ನಪಟ್ಟಣ(20.9 ಕೋಟಿ), ಧರ್ಮಪುರಿ(25.4 ಕೋಟಿ ರೂ.), ದೊಡ್ಡಬಳ್ಳಾಪುರ (21.3 ಕೋಟಿ), ಮಂಡ್ಯ (20.1 ಕೋಟಿ), ರಾಮನಗರ(21 ಕೋಟಿ), ಹಿಂದೂಪುರ(23.9 ಕೋಟಿ), ತುಮಕೂರು(24.1 ಕೋಟಿ), ವೈಟ್ ಫೀಲ್ಡ್(23.3 ಕೋಟಿ), ಕುಪ್ಪಂ(17.6 ಕೋಟಿ), ಮಲ್ಲೇಶ್ವರ(20 ಕೋಟಿ), ಮಾಲೂರು (20.4 ಕೋಟಿ) ಸೇರಿದಂತೆ ಸೌಕರ್ಯಾಭಿವೃದ್ಧಿಯಲ್ಲಿ ಹಿಂದುಳಿದ, ಅವ್ಯವಸ್ಥೆ ಹೊಂದಿರುವ ಸುಮಾರು 15 ರೈಲ್ವೇ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ.

ಅಮೃತ ಭಾರತ ಯೋಜನೆಯಡಿ ದೇಶದ 1275 ರೈಲ್ವೇ ನಿಲ್ದಾಣಗಳನ್ನು ಆಧುನೀಕರಣಗೊಳಿಸಲು ಸರ್ಕಾರ ಸಜ್ಜಾಗಿದೆ. ನಿಲ್ದಾಣದಲ್ಲಿ ಶೌಚಗ್ರಹ, ವಿಶ್ರಾಂತಿ ಗೃಹ, ಟಿಕೆಟ್ ಕೌಂಟರ್ ಇತ್ಯಾದಿ ಘಟಕಗಳನ್ನು ಆಧುನೀಕರಣಗೊಳಿಸಲಾಗುತ್ತದೆ. ಒಟ್ಟಾರೆಯಾಗಿ ರೈಲ್ವೇ ನಿಲ್ದಾಣಗಳನ್ನು ಪ್ರಯಾಣಿಕರನ್ನು ಆಕರ್ಷಿಸುವಂತೆ ಆಧುನೀಕರಣಗೊಳಿಸಲು ಈ ಯೋಜನೆ ರೂಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments