Webdunia - Bharat's app for daily news and videos

Install App

ಪ್ರಧಾನಿ ಮೋದಿ ನಿಜವಾದ ದೇಶಭಕ್ತ: ಸಿಧು

Webdunia
ಮಂಗಳವಾರ, 14 ಜೂನ್ 2016 (16:29 IST)
ಪ್ರಧಾನಿ ನರೇಂದ್ರ ಮೋದಿ ನಿಜವಾದ ದೇಶಭಕ್ತರಾಗಿದ್ದು, ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಲು ಸಮರ್ಥರು ಎಂದು ಭಾರತೀಯ ಜನತಾ ಪಕ್ಷದ ಸಂಸದ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. 

ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನ್ನಾಡುತ್ತಿದ್ದ ಸಿಧು, ಚಂದ್ರ ಶೇಖರ್ ಆಜಾದ್ ಪಾರ್ಕ್‌ಗೆ ಭೇಟಿ ಇತ್ತು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರನಿಗೆ ಗೌರವ ನಮನ ಸಲ್ಲಿಸಿದ್ದು ಮೋದಿ ಅವರು ನಿಜವಾದ ದೇಶಭಕ್ತರೆನ್ನುವುದನ್ನು ಸ್ಪಷ್ಟ ಪಡಿಸುತ್ತದೆ ಎಂದು ಸಿಧು ಅಭಿಪ್ರಾಯ ಪಟ್ಟಿದ್ದಾರೆ.
 
ಮನುಷ್ಯನಲ್ಲಿ ಎರಡು ರೀತಿಯ ಭಾವನೆಗಳಿರುತ್ತವೆ. ಮೊದಲನೆಯದು ರೊಟ್ಟಿ, ಬಟ್ಟೆ, ಮನೆ ಹೊಂದುವುದು, ಇನ್ನೊಂದು ದೇಶದ ಮೇಲೆ ಪ್ರೀತಿ ಮತ್ತು ಅಪರ್ಣಾ ಭಾವ. ಪ್ರಧಾನಿ ಮೋದಿ ತಮ್ಮನ್ನು ತಾವು ಸಂಪೂರ್ಣವಾಗಿ ದೇಶಕ್ಕೆ ಅರ್ಪಿಸಿಕೊಂಡಿದ್ದಾರೆ ಎಂದು ಸಿಧು ತಮ್ಮ ಪಕ್ಷದ ನಾಯಕನನ್ನು ಕೊಂಡಾಡಿದ್ದಾರೆ. 
 
ಸ್ವಾತಂತ್ರ್ಯ ಹೋರಾಟಗಾರ ರಾಮ ಪ್ರಸಾದ್ ಬಿಸ್ಮಿಲ್ ಅವರ 'ಸರ್ಫರೋಶಿ ಕಿ ತಮನ್ನಾ ಅಬ್ ಹಮಾರೆ ದಿಲ್ ಮೇ ಹೈ' ಸಾಲುಗಳನ್ನು ಉಚ್ಛರಿಸಿದ ಸಿಕ್ಸರ್ ಸಿಧು ಪ್ರತಿ ಭಾರತೀಯ ದೇಶದ ಶ್ರೀಮಂತ ಸಂಸ್ಕೃತಿ ಮತ್ತು ಅದ್ಭುತ ಇತಿಹಾಸದ ಬಗ್ಗೆ ಅಭಿಮಾನ ಪಟ್ಟುಕೊಳ್ಳಬೇಕು. ಪ್ರತಿಯೊಬ್ಬ ನಾಗರಿಕ ಭಾರತದ ಸಂಸ್ಕೃತಿ ಪೋಷಣೆಗೆ ತಮ್ಮಿಂದಾದ ಕೊಡುಗೆ ನೀಡಬೇಕು ಮತ್ತು ದೇಶವನ್ನು ಪ್ರಗತಿ ಪಥದತ್ತ  ಕೊಂಡೊಯ್ಯಬೇಕು ಎಂದು ಅವರು ಕೋರಿ ಕೊಂಡಿದ್ದಾರೆ.
 
ಕೆಲವು ಸ್ವಾತಂತ್ರ್ಯ ಹೋರಾಟಗಾರರು ಸಂಸ್ಥೆಗಳಂತಿದ್ದು ತಲೆಮಾರುಗಳಿಗೆ ಸ್ಪೂರ್ತಿಯ ಸೆಲೆಯಾಗಿದ್ದಾರೆ ಎಂದು ಸಿಧು ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments