Select Your Language

Notifications

webdunia
webdunia
webdunia
webdunia

ನುಡಿದಂತೆ ನಡೆದ ಪ್ರಧಾನಿ ಮೋದಿ: ಪಾಕ್ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ನುಡಿದಂತೆ ನಡೆದ ಪ್ರಧಾನಿ ಮೋದಿ: ಪಾಕ್ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ
ನವದೆಹಲಿ , ಗುರುವಾರ, 29 ಸೆಪ್ಟಂಬರ್ 2016 (14:51 IST)
ಉತ್ತರ ಕಾಶ್ಮೀರದ ಉರಿ ಸೇನಾ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಹೇಳಿದ್ದ ಪ್ರಧಾನಿ ಮೋದಿ, ನುಡಿದಂತೆ ನಡೆದು ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ್ದಾರೆ.
 
ಕಾಶ್ಮೀರದ ಉರಿ ಪ್ರದೇಶದ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಗೆ ಪ್ರತೀಕಾರವಾಗಿ ನಿನ್ನೆ ರಾತ್ರಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಕ್ಯಾಂಪ್‌ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು 38 ಉಗ್ರರ ರುಂಡ ಚೆಂಡಾಡಲಾಗಿದೆ.
 
ಕೇರಳದ ಕೋಳಿಕ್ಕೋಡ್‌ನಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, 18 ಭಾರತೀಯ ಸೈನಿಕರ ಬಲಿದಾನ ವ್ಯರ್ಥವಾಗುವುದಿಲ್ಲ. ಭಾರತೀಯ ಸೈನಿಕರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದರು.
 
ಇದೀಗ ಪ್ರಧಾನಿ ಮೋದಿಯವರು ನುಡಿದಂತೆ ನಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮಿರದೊಳಗೆ ನುಗ್ಗಿ ಆರು ಭಯೋತ್ಪಾದಕ ಅಡಗು ತಾಣಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಪಾಕಿಸ್ತಾನ ಸೇನೆಯ ಇಬ್ಬರು ಯೋಧರು ಸೇರಿದಂತೆ 38 ಉಗ್ರರನ್ನು ಹತ್ಯೆಗೈಯುವ ಮೂಲಕ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಲಾಗಿದೆ.
 
ಈ ಸೀಮಿತ ದಾಳಿಯ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನದ ಗಡಿಯಲ್ಲಿ ಯುದ್ಧದ ವಾತಾವರಣ ಸೃಷ್ಠಿಯಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಪಿಓಕೆಯಲ್ಲಿ ಉಗ್ರರನ್ನು ಸದೆಬಡೆದ ಭಾರತೀಯ ಸೇನೆಗೆ ಕಾಂಗ್ರೆಸ್ ಬೆಂಬಲ