Webdunia - Bharat's app for daily news and videos

Install App

ಸಂಸತ್ತಿಗೆ ತೆರಳುವ ಮುನ್ನ ವಿಪಕ್ಷಗಳಿಗೆ ಖಡಕ್ ಸಂದೇಶ ಕೊಟ್ಟ ಪ್ರಧಾನಿ ಮೋದಿ

Krishnaveni K
ಸೋಮವಾರ, 24 ಜೂನ್ 2024 (11:30 IST)
ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಇಂದು ಮೊದಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಂಸತ್ ಗೆ ಬರುವ ಮುನ್ನ ವಿಪಕ್ಷಗಳಿಗೆ ಖಡಕ್ ಸಂದೇಶ ಕೊಟ್ಟಿದ್ದಾರೆ.

ಇಂದು ಮೋದಿ 3.0 ಸರ್ಕಾರದ ಮೊದಲ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನದಲ್ಲಿ ಇಂದು ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಹಂಗಾಮಿ ಸ್ಪೀಕರ್ ಭ್ರಾರ್ತೃಹರಿ ಪ್ರಮಾಣ ವಚನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಆದರೆ ಹಂಗಾಮಿ ಸ್ಪೀಕರ್ ಆಯ್ಕೆ ವಿಚಾರದಲ್ಲಿ ಅಪಸ್ವರವೆತ್ತಿರುವ ವಿಪಕ್ಷಗಳು ಪ್ರತಿಭಟನೆ ನಡೆಸಿದ್ದು, ಪ್ರಮಾಣ ವಚನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

ಇನ್ನು, 18 ನೇ ಲೋಕಸಭೆ ಆರಂಭಕ್ಕೆ ಮುನ್ನ ವಿಪಕ್ಷಗಳಿಗೆ ಖಡಕ್ ಸಂದೇಶ ನೀಡಿರುವ ಪ್ರಧಾನಿ ಮೋದಿ, ವಿಪಕ್ಷಗಳು ರಚನಾತ್ಮಕ ಚರ್ಚೆಯಲ್ಲಿ ಪಾಲ್ಗೊಳ್ಳಬೇಕೇ ಹೊರತು, ಗದ್ದಲವೇರ್ಪಡಿಸುವುದರಲ್ಲೇ ಸಮಯ ಪೋಲು ಮಾಡಬಾರದು. ಇದನ್ನು ಜನರೂ ಬಯಸಲ್ಲ ಎಂದಿದ್ದಾರೆ.

ಈ ಬಾರಿ ನೂತನ ಸಂಸತ್ ಆರಂಭದಲ್ಲೇ ವಿಪಕ್ಷಗಳಿಗೆ ನೀಟ್ ಅಕ್ರಮದ ಪ್ರಮುಖ ಅಸ್ತ್ರವೊಂದು ಸಿಕ್ಕಿದೆ. ಇದೇ ವಿಚಾರವನ್ನಿಟ್ಟುಕೊಂಡು ಕಲಾಪದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಯಾರಿ ನಡೆಸಿವೆ. ಸ್ಪೀಕರ್ ವಿಚಾರದಲ್ಲಿ ಪ್ರತಿಭಟನೆಯ ಮೂಲಕವೇ ಈ ಲೋಕಸಭೆಯ ಮೊದಲ ಕಲಾಪ ಆರಂಭಗೊಳ್ಳುತ್ತಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments