Webdunia - Bharat's app for daily news and videos

Install App

ಪ್ರತಿಯೊಂದು ವಿಷಯಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯಿಸುವ ಅಗತ್ಯವಿಲ್ಲ: ವಿ.ಕೆ.ಸಿಂಗ್

Webdunia
ಸೋಮವಾರ, 29 ಜೂನ್ 2015 (18:58 IST)
ಲಲಿತ್ ಮೋದಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಮೌನವಾಗಿದ್ದಾರೆ ಎನ್ನುವ ಆರೋಪಗಳನ್ನು ತಲ್ಳಿಹಾಕಿದ ಕೇಂದ್ರ ಸಚಿವ ವಿ.ಕೆ.ಸಿಂಗ್, ಪ್ರತಿಯೊಂದಕ್ಕೂ ಪ್ರಧಾನಿ ಉತ್ತರ ನೀಡುವ ಅಗತ್ಯವಿಲ್ಲ. ಸಮಯ ಬಂದಾಗ ಅವರೇ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ. 
 
ಲಲಿತ್ ಮೋದಿ ವಿವಾದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಲೇಬೇಕು ಎಂದು ಯಾಕೆ ಒತ್ತಾಯಿಸುತ್ತಿದ್ದೀರಾ? ಪ್ರತಿಯೊಂದು ವಿಷಯಕ್ಕೂ ಉತ್ತರಿಸುವುದು ಸೂಕ್ತವಲ್ಲ. ಖಾಸಗಿ ಚಾನೆಲ್‌ನಲ್ಲಿ ಯಾವುದೋ ಸುದ್ದಿ ಬರುತ್ತಿರುತ್ತದೆ. ಅಂತಹ ಸುದ್ದಿಗಳಿಗೆಲ್ಲಾ ಪ್ರತಿಕ್ರಿಯೆ ನೀಡಲು ಸಾಧ್ಯವಾಗುತ್ತದೆಯೇ ಎಂದು ತಿರುಗೇಟು ನೀಡಿದ್ದಾರೆ.
 
ಕೇಂದ್ರ ವಿದೇಶಾಂಗ ಸಚಿವಾಲಯ ಆರ್‌ಟಿಐ ಮಾಹಿತಿ ಪಡೆಯುವುದನ್ನು ತಡೆಹಿಡಿದಿದೆ ಎನ್ನುವ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆರ್‌ಟಿಐ ಇಲಾಖೆಯಲ್ಲ ಕೆಲ ನಿಯಮಗಳಿರುತ್ತವೆ. ಅದರಂತೆ ಸಂಬಂಧಪಟ್ಟ ಸಚಿವರು ಹೇಳಿಕೆ ನೀಡಿರುತ್ತಾರೆ ಎಂದರು.
 
ಟೀಕಾಕಾರರು ಸದಾ ಟೀಕಿಸುತ್ತಿರುತ್ತಾರೆ. ಆದ್ದರಿಂದ ಅನಗತ್ಯ ವಿಷಯಗಳಿಗೆಲ್ಲಾ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಇಂತಹ ವಿಷಯಗಳಿಗೆ  ಯಾವುದೇ ಆಧಾರವಿರುವುದಿಲ್ಲ ಎಂದು ಹೇಳಿದ್ದಾರೆ.
 
ಕೆಲ ಖಾಸಗಿ ಚಾನೆಲ್‌ಗಳು ಕಳೆದ 15 ದಿನಗಳಿಂದ ಲಲಿತ್ ಮೋದಿ ಪ್ರಕರಣವನ್ನು ಬಿತ್ತರಿಸುತ್ತಿವೆ. ಅವರಿಗೆ ಸುದ್ದಿಯನ್ನು ಬಿತ್ತರಿಸುವ ಗುತ್ತಿಗೆ ಕೊಟ್ಟಿದ್ದಾದರೂ ಯಾರು?  ಎಂದು ಕೇಂದ್ರ ಸಚಿವ ವಿ.ಕೆ.ಸಿಂಗ್ ಪ್ರಶ್ನಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments