ಭಯೋತ್ಪಾದಕರನ್ನು ಮನೆಗೆ ನುಗ್ಗಿ ಹೊಡೆಯಲಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

Krishnaveni K
ಗುರುವಾರ, 11 ಏಪ್ರಿಲ್ 2024 (17:10 IST)
ರಿಷಿಕೇಶ: ದೇಶದಲ್ಲಿ ಈಗ ಇರುವುದು ಸ್ಥಿರ ಸರ್ಕಾರ. ಹೀಗಾಗಿ ಭಯೋತ್ಪಾದಕರನ್ನು ಮನೆಗೇ ನುಗ್ಗಿ ಹೊಡೆದು ಕೊಲ್ಲಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರಾಖಂಡದ ರಿಷಿಕೇಶದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು ಭಯೋತ್ಪಾದಕರಿಗೆ ನಮ್ಮ ಸರ್ಕಾರ ತಕ್ಕ ಪಾಠ ಕಲಿಸಿದೆ ಎಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಲಾಗಿದೆ. ತ್ರಿವಳಿ ತಲಾಖ್ ಕಾನೂನಿಗೆ ತಿದ್ದುಪಡಿ ತರಲಾಗಿದೆ ಎಂದಿದ್ದಾರೆ.

ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಲಾಗಿದೆ. ಬಡವರಿಗೂ ಶೇ.100 ರಷ್ಟು ಮೀಸಲಾತಿ ಸಿಕ್ಕಿದೆ. ಕಳೆದ 10 ವರ್ಷಗಳಲ್ಲಿ ಭಾರತ ಹಿಂದೆಂದಿಗಿಂತಲೂ ಹೆಚ್ಚು ಬಲಿಷ್ಠವಾಗಿದೆ. ದೇಶದಲ್ಲಿ ಅಸ್ಥಿರ ಮತ್ತು ದುರ್ಬಲ ಸರ್ಕಾರವಿದ್ದಾಗ ಶತ್ರುಗಳು ಲಾಭ ಪಡೆದುಕೊಂಡಿದ್ದಾರೆ. ಆದರೆ ಈಗ ಬಲಿಷ್ಠ ಸರ್ಕಾರವಿದ್ದು, ಭಯೋತ್ಪಾದಕರನ್ನು ಮನೆಗೇ ನುಗ್ಗಿ ಕೊಲ್ಲಲಾಗುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಸೈನಿಕರಿಗೆ ಎದುರಾಳಿಗಳಿಂದ ರಕ್ಷಣೆ ಪಡೆಯಲು ಬುಲೆಟ್ ಪ್ರೂಫ್ ಜಾಕೆಟ್ ಕೂಡಾ ಇರಲಿಲ್ಲ. ಆದರೆ ಈಗ ಭಾರತದಲ್ಲೇ ತಯಾರಿಸಲಾದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಸೈನಿಕರಿಗೆ ನೀಡಿ ಅವರ ಪ್ರಾಣ ರಕ್ಷಣೆ ಮಾಡಿದ್ದು ಬಿಜೆಪಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ
Show comments