Webdunia - Bharat's app for daily news and videos

Install App

ಕಪ್ಪು ಹಣ ಹೊಂದಿದವರಿಗೆ ಸಮಯ ನೀಡದಿರುವುದೇ ಕೋಪಕ್ಕೆ ಕಾರಣ: ಪ್ರಧಾನಿ ಮೋದಿ

Webdunia
ಶುಕ್ರವಾರ, 25 ನವೆಂಬರ್ 2016 (11:37 IST)
ಕೇಂದ್ರ ಸರಕಾರದ ನಡೆಯಿಂದ ಕಾಳಧನಿಕರಿಗೆ ಹಣವನ್ನು ವರ್ಗಾಯಿಸಲು ಸಮಯ ದೊರೆಯದಿರುವುದರಿಂದ ಅಸಮಾಧಾನಗೊಂಡಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
 
ನೋಟು ನಿಷೇಧ ಕುರಿತಂತೆ ಪೂರ್ವ ಸಿದ್ದತೆ ಮಾಡಿಕೊಳ್ಳಲು ಸಮಯ ನೀಡಿದ್ದಲ್ಲಿ ಕಪ್ಪು ಹಣ ಹೊಂದಿದವರು ತಮ್ಮ ಹಣವನ್ನು ಬೇರೆ ಕಡೆ ವರ್ಗಾಯಿಸಲು ಸಫಲರಾಗುತ್ತಿದ್ದರು. ಇದೀಗ ಚಿಂತೆಗೊಳಗಾಗಿದ್ದಾರೆ ಎಂದು ತಿರುಗೇಟು ನೀಡಿದರು.
 
500 ಮತ್ತು 1000 ರೂ ನೋಟುಗಳನ್ನು ಬದಲಾಯಿಸಲು ನವೆಂಬರ್ 08 ರಂದು 72 ಗಂಟೆಗಳ ಕಾಲ ಸಮಯಾವಕಾಶ ನೀಡಿದ್ದಲ್ಲಿ ಕಪ್ಪು ಹಣ ಹೊಂದಿದವರು ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತಿದ್ದರು ಎಂದು ವ್ಯಂಗ್ಯವಾಡಿದರು. 
 
ಲೋಕಸಭೆಯಲ್ಲಿ ವಿಪಕ್ಷಗಳು ನೋಟು ನಿಷೇಧ ಕುರಿತಂತೆ ಕೇಂದ್ರ ಸರಕಾರವನ್ನು ಟೀಕಿಸುತ್ತಿವೆ. ನೋಟು ನಿಷೇಧ ಜಾರಿಗೊಳಿಸುವಾಗ ಯಾಕೆ ಪೂರ್ವ ಸಿದ್ದತೆ ಮಾಡಿಕೊಂಡಿಲ್ಲ ಎನ್ನುವುದು ವಿಪಕ್ಷಗಳ ಪ್ರಶ್ನೆಯಾಗಿದೆ ಎಂದು ತಿಳಿಸಿದ್ದಾರೆ.
 
ಆದರೆ, ವಿಪಕ್ಷಗಳ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅವರಿಗೆ ಕಪ್ಪು ಹಣವನ್ನು ವರ್ಗಾಯಿಸಲು ಸಮಯ ನೀಡದಿರುವುದೇ ಅವರ ಕೋಪಕ್ಕೆ ಕಾರಣವಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರು: ಉಗ್ರ ನಾಸಿರ್ ಜೈಲಿನಿಂದ ಪರಾರಿಯಾಗಲು ನಡೆದಿತ್ತು ಖತರ್ನಾಕ್ ಪ್ಲ್ಯಾನ್

ಹೃದಯಾಘಾತಕ್ಕೆ ತಿಂಗಳ ಮುಂಚೇ ಸಿಗುವ ಮುನ್ಸೂಚನೆಗಳೇನು: ಡಾ ಸಿಎನ್ ಮಂಜುನಾಥ್

ಥಾಣೆ: ಮುಟ್ಟಾಗಿದೆಯಾ ಎಂದು ಬಾಲಕಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್

ಮುಂದಿನ ಸುದ್ದಿ
Show comments