ಬೆಂಬಲ ಬೇಕಿದ್ದರೆ ರಾಮ ಮಂದಿರ ನಿರ್ಮಾಣದ ಭರವಸೆ ನೀಡಿ

Webdunia
ಶನಿವಾರ, 14 ಜನವರಿ 2017 (17:55 IST)
ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣದ ಭರವಸೆ ನೀಡಿದರೆ ಮಾತ್ರ ಸದ್ಯದಲ್ಲೇ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಂತರು ಬಿಜೆಪಿಗೆ ಬೆಂಬಲ ನೀಡುತ್ತಾರೆ ಎಂದು ವಿವಾದಿತ ರಾಮಜನ್ಮಭೂಮಿ ಮಂದಿರದ ಅರ್ಚಕರು ಹೇಳಿದ್ದಾರೆ.
ಮಹಾಂತ ಮತ್ತು ಸಾಧುಗಳು ರಾಮನಲ್ಲಿ ನಂಬಿಕೆ ಇಟ್ಟಿದ್ದು, ಅಯೋಧ್ಯೆಯಲ್ಲಿ ರಾಮನ ದೇವಸ್ಥಾನವನ್ನು ನೋಡುವುದೊಂದೇ ಅವರ ಏಕೈಕ ಬಯಕೆಯಾಗಿದೆ ಎಂದು ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. 
 
ಮೋದಿ ಸರ್ಕಾರ ಅಧಿಕಾರಕ್ಕೇರಿದಾಗ ಈಗಲಾದರೂ ಮಂದಿರ ನಿರ್ಮಾಣವಾಗುತ್ತದೆ ಎಂಬ ನಂಬಿಕೆ ಬೆಳೆಯಿತು. ಈಗಲಾದರೂ ಮೋದಿ ಅವರು ಅಯೋಧ್ಯೆಗೆ ಭೇಟಿ ನೀಡಬೇಕು ಮತ್ತು ತಮ್ಮ ಅಧಿಕಾರಾವಧಿಯಲ್ಲಿಯೇ ಮಂದಿರ ನಿರ್ಮಾಣವಾಗುತ್ತದೆ ಎಂಬ ಭರವಸೆ ನೀಡಬೇಕು ಮತ್ತು ಘೋಷಣೆಯನ್ನು ಕೈಗೊಳ್ಳಬೇಕು, ಹೀಗಾದರೆ ಮಾತ್ರ ನಾವು ಹಿಂದೂ ಸಮುದಾಯದವರನ್ನು ಒಗ್ಗೂಡಿಸಿ ಬಿಜೆಪಿಗೆ ಮತ ನೀಡಿ ಕೇಳಿಕೊಳ್ಳುತ್ತೇವೆ. ನಾವು ಬೆಂಬಲ ನೀಡಿದರೆ ಬಿಜೆಪಿಗೆ ಗೆಲುವು ನಿಶ್ಚಿತವಾಗುತ್ತದೆ ಎಂದಿದ್ದಾರೆ ದಾಸ್.
 
ದಾಸ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಯೋಧ್ಯೆಯ ರಸಿಕ್ ನಿವಾಸ ದೇವಾಲಯದ ಮಹಾಂತ ರಘುವರ್ ಶರಣ್, ಬಿಜೆಪಿ ನಾಯಕರು ಅಯೋಧ್ಯೆ ರಾಮ ಮಂದಿರ ಆಂದೋಲನದ ಮೂಲಕ ರಾಜಕೀಯ ಲಾಭವನ್ನು ಪಡೆದುಕೊಂಡರು ಆದರೆ ಈ ವಿಷಯವನ್ನು ಎಂದಿಗೂ ಸಂಸತ್ತಿನಲ್ಲಿ ಎತ್ತಲಿಲ್ಲ ಎಂದಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments