Webdunia - Bharat's app for daily news and videos

Install App

ಬೆಂಬಲ ಬೇಕಿದ್ದರೆ ರಾಮ ಮಂದಿರ ನಿರ್ಮಾಣದ ಭರವಸೆ ನೀಡಿ

Webdunia
ಶನಿವಾರ, 14 ಜನವರಿ 2017 (17:55 IST)
ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣದ ಭರವಸೆ ನೀಡಿದರೆ ಮಾತ್ರ ಸದ್ಯದಲ್ಲೇ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಂತರು ಬಿಜೆಪಿಗೆ ಬೆಂಬಲ ನೀಡುತ್ತಾರೆ ಎಂದು ವಿವಾದಿತ ರಾಮಜನ್ಮಭೂಮಿ ಮಂದಿರದ ಅರ್ಚಕರು ಹೇಳಿದ್ದಾರೆ.
ಮಹಾಂತ ಮತ್ತು ಸಾಧುಗಳು ರಾಮನಲ್ಲಿ ನಂಬಿಕೆ ಇಟ್ಟಿದ್ದು, ಅಯೋಧ್ಯೆಯಲ್ಲಿ ರಾಮನ ದೇವಸ್ಥಾನವನ್ನು ನೋಡುವುದೊಂದೇ ಅವರ ಏಕೈಕ ಬಯಕೆಯಾಗಿದೆ ಎಂದು ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. 
 
ಮೋದಿ ಸರ್ಕಾರ ಅಧಿಕಾರಕ್ಕೇರಿದಾಗ ಈಗಲಾದರೂ ಮಂದಿರ ನಿರ್ಮಾಣವಾಗುತ್ತದೆ ಎಂಬ ನಂಬಿಕೆ ಬೆಳೆಯಿತು. ಈಗಲಾದರೂ ಮೋದಿ ಅವರು ಅಯೋಧ್ಯೆಗೆ ಭೇಟಿ ನೀಡಬೇಕು ಮತ್ತು ತಮ್ಮ ಅಧಿಕಾರಾವಧಿಯಲ್ಲಿಯೇ ಮಂದಿರ ನಿರ್ಮಾಣವಾಗುತ್ತದೆ ಎಂಬ ಭರವಸೆ ನೀಡಬೇಕು ಮತ್ತು ಘೋಷಣೆಯನ್ನು ಕೈಗೊಳ್ಳಬೇಕು, ಹೀಗಾದರೆ ಮಾತ್ರ ನಾವು ಹಿಂದೂ ಸಮುದಾಯದವರನ್ನು ಒಗ್ಗೂಡಿಸಿ ಬಿಜೆಪಿಗೆ ಮತ ನೀಡಿ ಕೇಳಿಕೊಳ್ಳುತ್ತೇವೆ. ನಾವು ಬೆಂಬಲ ನೀಡಿದರೆ ಬಿಜೆಪಿಗೆ ಗೆಲುವು ನಿಶ್ಚಿತವಾಗುತ್ತದೆ ಎಂದಿದ್ದಾರೆ ದಾಸ್.
 
ದಾಸ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಯೋಧ್ಯೆಯ ರಸಿಕ್ ನಿವಾಸ ದೇವಾಲಯದ ಮಹಾಂತ ರಘುವರ್ ಶರಣ್, ಬಿಜೆಪಿ ನಾಯಕರು ಅಯೋಧ್ಯೆ ರಾಮ ಮಂದಿರ ಆಂದೋಲನದ ಮೂಲಕ ರಾಜಕೀಯ ಲಾಭವನ್ನು ಪಡೆದುಕೊಂಡರು ಆದರೆ ಈ ವಿಷಯವನ್ನು ಎಂದಿಗೂ ಸಂಸತ್ತಿನಲ್ಲಿ ಎತ್ತಲಿಲ್ಲ ಎಂದಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments