Webdunia - Bharat's app for daily news and videos

Install App

ಪಾಕ್ ಉಗ್ರವಾದದ ಮಾತೃ ಸ್ವರೂಪಿ: ಮೋದಿ

Webdunia
ಭಾನುವಾರ, 16 ಅಕ್ಟೋಬರ್ 2016 (16:02 IST)
ಪ್ರಧಾನಿ ಮೋದಿ ಇಂದು ಬ್ರಿಕ್ಸ್ ಸಮಾವೇಶಕ್ಕೆ ವಿಧ್ಯುಕ್ತ ಚಾಲನೆ ನೀಡಿದ್ದು, ಪಾಕಿಸ್ತಾನ ಉಗ್ರವಾದದ ತಾಯಿ ಸ್ವರೂಪವನ್ನು ಪಡೆದುಕೊಂಡಿದೆ, ಬ್ರಿಕ್ಸ್ ರಾಷ್ಟ್ರಗಳು ಒಗ್ಗೂಡಿ ಭಯೋತ್ಪಾದನೆ ವಿರುದ್ಧ ಹೋರಾಡಬೇಕಿದೆ ಎಂದಿದ್ದಾರೆ. 

ನಿರೀಕ್ಷೆಯಂತೆ ಭಯೋತ್ಪಾದನೆ ವಿಷಯವನ್ನು ಮುಂದಿಟ್ಟುಕೊಂಡು ಸ್ವಾಗತ ಭಾಷಣ ಮಾಡಿದ ಪ್ರಧಾನಿ ಮೋದಿ ನಾವೆಲ್ಲರೂ ಒಕ್ಕೊರಲಿನಿಂದ ಉಗ್ರವಾದದ ಬಗ್ಗೆ ಧ್ವನಿ ಎತ್ತಬೇಕು. ಪಾಕಿಸ್ತಾನ ಉಗ್ರವಾದದ ತಾಯಿಯ ಸ್ವರೂಪವನ್ನು ಪಡೆದುಕೊಂಡಿದೆ
ರಾಜಕೀಯ ಲಾಭಕ್ಕಾಗಿ ಉಗ್ರವಾದವನ್ನು ಪೋಷಿಸುತ್ತಿದೆ. ಇದರ ಪರಿಣಾಮವಾಗಿ ಸಾಮಾನ್ಯ ಪ್ರಜೆಗಳು ಸಾಕಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ. ಇತರ ರಾಷ್ಟ್ರಗಳ ಮೇಲೂ ಪಾಕ್ ಪ್ರಚೋದಿತ ಉಗ್ರವಾದ ಪರಿಣಾಮ ಬೀರುತ್ತಿದೆ. ಬ್ರಿಕ್ಸ್‌ ಮತ್ತು ಬ್ರಿಮ್ಸ್‌‌ಟೆಕ್‌ನ ಎಲ್ಲ ರಾಷ್ಟ್ರಗಳು ಒಂದೇ ಸ್ವರದಲ್ಲಿ ಮಾತನಾಡಬೇಕಾಗುತ್ತದೆ ಎನ್ನುವುದರ ಮೂಲಕ ಪಾಕ್‌ನ್ನು ಮೂಲೆಗುಂಪು ಮಾಡಲು ಸರ್ವ ಪ್ರಯತ್ನಗಳನ್ನು ನಡೆಸಿದ್ದಾರೆ. 
 
ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ಎಲ್ಲರೂ ವಿರೋಧಿಸಬೇಕು. ಭಯೋತ್ಪಾದನೆ ಸಮರ್ಥನೆ ಅವರ ದೃಷ್ಟಿಕೋನವನ್ನು ತೋರಿಸುತ್ತದೆ. ಇದನ್ನು ಭಾರತ ಖಂಡಿಸುತ್ತದೆ. ಉಗ್ರವಾದ ನಮ್ಮ ಆರ್ಥಿಕತೆ ಮೇಲೆ ನೇರ ಪರಿಣಾಮವನ್ನು ಬೀರುತ್ತದೆ. ನಮ್ಮ ನೆರೆಯ ರಾಷ್ಟ್ರ ಉಗ್ರವಾದದ ಮಾತೃಸ್ವರೂಪವನ್ನು ಪಡೆದುಕೊಂಡಿರುವುದು ದುರದೃಷ್ಟಕರ ಎಂದು ಮೋದಿ ವಿಷಾದ ವ್ಯಕ್ತ ಪಡಿಸಿದ್ದಾರೆ. 

ನಿನ್ನೆ ರಷ್ಯಾ ಜಕೆ 16 ಒಪ್ಪಂದಗಳಿಗೆ ಸಹಿ ಹಾಕಿದ್ದ ಮೋದಿ ಭಯೋತ್ಪಾದನೆ ವಿರುದ್ಧ ರಷ್ಯಾದ ಬೆಂಬಲ ಪಡೆಯುವಲ್ಲಿ ಸಫಲರಾಗಿದ್ದರು, ಹೊಸ ಸ್ನೇಹಿತರು ಬಂದರೂ ಹಳೆಯ ಸ್ನೇಹಿತರಿಗೆ ಹೆಚ್ಚು ಮಹತ್ವ ಎನ್ನುವುದರ ಮೂಲಕ ರಾಜತಾಂತ್ರಿಕ ಜಾಣ್ಮೆಯನ್ನು ಮೆರೆದಿದ್ದ ಮೋದಿ ಇದೇ ಜಾಣ್ಮೆಯಿಂದ ಚೀನಾದ ವಿಶ್ವಾಸವನ್ನುಗಳಿಸಿ ಪಾಕ್ ವಿರುದ್ಧ ಅದನ್ನು ಎತ್ತಿ ಕಟ್ಟುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.
 
ಸದಾ ಪಾಕಿಸ್ತಾನವನ್ನು ಬೆಂಬಲಿಸುವ ಚೀನಾವನ್ನು ಒಲಿಸಿಕೊಂಡಿದ್ದೇ ಆದರೆ ಅದು ಮೋದಿ ಅವರು ಸಾಧಿಸಿದ ದೊಡ್ಡ ಮಟ್ಟದ ರಾಜತಾಂತ್ರಿಕ ಗೆಲುವೆನಿಸಿಕೊಳ್ಳಲಿದೆ. ಚೀನಾ ದೇಶ ಕೂಡ ಪಾಕ್ ಪ್ರಚೋದಿತ ಉಗ್ರವಾದದ ಬಗ್ಗೆ ಗಟ್ಟಿ ಧ್ವನಿಯಲ್ಲಿ ಮಾತನ್ನಾಡಿದರೆ ಪಾಕಿಸ್ತಾನಕ್ಕೆ ಅತಿ ದೊಡ್ಡ ಛೀಮಾರಿಯಾಗುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments