Webdunia - Bharat's app for daily news and videos

Install App

ವಯನಾಡಿನಿಂದಲೂ ಓಡಿಹೋಗಬೇಕಾಗುತ್ತದೆ: ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಟಾಂಗ್

Krishnaveni K
ಶನಿವಾರ, 20 ಏಪ್ರಿಲ್ 2024 (14:36 IST)
ಮುಂಬೈ: ಅಮೇಠಿಯಿಂದ ಸೋಲಿನ ಭಯದಿಂದ ಓಡಿ ಹೋದ ಕಾಂಗ್ರೆಸ್ ರಾಜಕುಮಾರ ಮುಂದೆ ವಯನಾಡಿನಿಂದಲೂ ಓಡಿ ಹೋಗಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಹೆಸರು ಹೇಳದೇ ಪ್ರಧಾನಿ ಮೋದಿ ಟಾಂಗ್ ಕೊಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಇಂದು ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಅಮೇಠಿಯಿಂದ ಕಾಂಗ್ರೆಸ್ ರಾಜಕುಮಾರನನ್ನು ಸ್ಮೃತಿ ಇರಾನಿ ಓಡಿಸಿದರು. ಇದೀಗ ವಯನಾಡಿನಿಂದಲೂ ಅವರಿಗೆ ಓಡುವ ಪರಿಸ್ಥಿತಿ ಬರಬಹುದು ಎಂದಿದ್ದಾರೆ.

‘ಕಾಂಗ್ರೆಸ್ ರಾಜಕುಮಾರನಿಗೆ ವಯನಾಡಿನಲ್ಲೂ ಅಪಾಯ ಎದುರಾಗಿದೆ. ಇತ್ತೀಚೆಗೆ ಕೇರಳ ಸಿಎಂ ಪಿಣರಾಯಿ  ವಿಜಯ್ ಯಾವ ಭಾಷೆಯಲ್ಲಿ ಅವರಿಗೆ ಬೈದಿದ್ದಾರೆಂದರೆ ನಾನು ಕೂಡಾ ಅಂತಹ ಪದ ಬಳಕೆ ಮಾಡುವುದಿಲ್ಲ. ವಯನಾಡಿನಲ್ಲಿ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ತನ್ನ ರಾಜಕುಮಾರನಿಗೆ ಮತ್ತೊಂದು ಸೀಟು ಹುಡುಕಾಡಲಿದೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್ ಗಾಂಧಿ ಕುಟುಂಬ ಸ್ಪರ್ಧಿಸುತ್ತಿದ್ದ ರಾಯ್ ಬರೇಲಿ ಮತ್ತು ಅಮೇಠಿಗೆ ಇದುವರೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಈ ಬಗ್ಗೆ ಟಾಂಗ್ ಕೊಟ್ಟಿರುವ ಮೋದಿ ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ವರ್ಷ ತಲೆತಲಾಂತರದಿಂದ ಸ್ಪರ್ಧಿಸುತ್ತಾ ಬಂದಿದ್ದ ಕ್ಷೇತ್ರದಲ್ಲಿ ಈ ಬಾರಿ ವೋಟ್ ಸಿಗಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ನೊಂದಿಗೆ ಭಾರತದ ಮಾಹಿತಿ ಹಂಚಿಕೆ: ಗುಜರಾತ್‌ನ ವ್ಯಕ್ತಿ ಅರೆಸ್ಟ್‌

Tejasvi Surya: ಪಹಲ್ಗಾಮ್ ನಲ್ಲಿ ಬಲಿಯಾದ ಮಂಜುನಾಥ್ ಪುತ್ರನಿಗೆ ನೀಡಿದ್ದ ಭರವಸೆ ಈಡೇರಿಸಿದ ತೇಜಸ್ವಿ ಸೂರ್ಯ

Kerala Monsoon: ರೈತರಿಗೆ ಮುಂಗಾರಿನ ಸಿಹಿ ಸುದ್ದಿ, ಕೇರಳಕ್ಕೆ ಎಂಟ್ರಿ ಕೊಟ್ಟ ವರುಣ

KCET results live: ಜನಿವಾರ ತೆಗೆಸಿದ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ

KCET Results live: ಕೆಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ: ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments