ರಾಮಪ್ರತಿಷ್ಠಾಪನಾ ಕಾರ್ಯಕ್ರಮದ ಬಗ್ಗೆ ಆಡಿಯೋ ಹಂಚಿಕೊಂಡ ಪಿಎಂ

geetha
ಶುಕ್ರವಾರ, 12 ಜನವರಿ 2024 (16:00 IST)
ನವದೆಹಲಿ: ಇಂದಿನಿಂದ ಕೇವಲ ಹನ್ನೊಂದು ದಿನ ಮಾತ್ರ ಬಾಕಿಯಿರುವುದರಿಂದ ಅನುಷ್ಠಾನಗಳೆಲ್ಲಾ ಇಂದಿನಿಂದಲೇ ಪ್ರಾರಂಭವಾಗುತ್ತದೆ. ಇದನ್ನು ಮನಸಿನಲ್ಲಿಟ್ಟುಕೊಂಡು ಪ್ರತಿಯೊಬ್ಬರು ಅನುಷ್ಠಾನದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. 

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನಾ ಮಹೂರ್ತಕ್ಕೆ ಕೇವಲ 11 ದಿನ ಬಾಕಿ ಉಳಿದಿದೆ. ಈ ವೇಳೆ ಪ್ರಧಾನಿ ನರೇಂದ್ರ‌ ಮೋದಿ ದೇಶದ ಜನತೆಗೆ ರಾಮಪ್ರತಿಷ್ಠಾಪನಾ ಕಾರ್ಯಕ್ರಮದ ಬಗ್ಗೆ ಆಡಿಯೋ ಸಂದೇಶವನ್ನು ಹಂಚಿಕೊಂಡಿದ್ದು, ಇಂಥದ್ದೊಂದು ಐತಿಹಾಸಿಕ ಸಂದರ್ಭಕ್ಕೆ ನಾನು ಸಮಸ್ತ ಭಾರತೀಯರನ್ನು ಪ್ರತಿನಿಧಿಸುವ ನಿಮಿತ್ತಮಾತ್ರವಾಗಿದ್ದೇನೆ ಎಂದು ಗೀತಾವಾಕ್ಯವನ್ನು  (ನಿಮಿತ್ತ ಮಾತ್ರಂ ಭವ ಸವ್ಯಸಾಚಿನ್‌ ) ಉಲ್ಲೇಖಿಸಿದ್ದಾರೆ . 
 
ಕೆಲವೊಮ್ಮೆ ಜೀವನದಲ್ಲಿ ಒಮ್ಮೆ ಮಾತ್ರ ಕಾಣಬಹುದಾದ ಸೌಭಾಗ್ಯದ ಘಳಿಗೆಗಳು ಬರುತ್ತವೆ. ಅಂಥದ್ದೊಂದು ಶುಭ ಸಂದರ್ಭವನ್ನು ನಾವು ಎದುರು ನೋಡುತ್ತಿದ್ದೇವೆ.  ಈ ಘಳಿಗೆಯು ಹಲವು ಪೀಳಿಗೆಗಳ ಕನಸಾಗಿತ್ತು. ಅದಿಂದು ನನಸಾಗಿದೆ. ವಿಶ್ವದ ಎಲ್ಲಾ ರಾಮಭಕ್ತರು ಸಹ ಈ ಸುವರ್ಣ ಕ್ಷಣವನ್ನು ಎದುರು ನೋಡುತ್ತಿದ್ದಾರೆ. ಕೋಟ್ಯಾಂತ ಭಾರತೀಯರ ಪ್ರತಿನಿಧಿಯಾಗಿ ನಾನೂ ಸಹ ಈ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಮಹಾ ಪುಣ್ಯವೇ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments