Webdunia - Bharat's app for daily news and videos

Install App

ಸಚಿವೆ ಉಮಾಭಾರತಿ ಬದಲಿಗೆ ಮೋದಿ ಮಧ್ಯಸ್ಥಿಕೆ ವಹಿಸಬೇಕಾಗಿತ್ತು: ಡಿಎಂಕೆ

Webdunia
ಬುಧವಾರ, 28 ಸೆಪ್ಟಂಬರ್ 2016 (19:04 IST)
ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆ ಹೊರತು ಕೇಂದ್ರ ಸಚಿವ ಉಮಾಭಾರತಿಯಲ್ಲ ಎಂದು  ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಹೇಳಿದ್ದಾರೆ.
 
ಕೇಂದ್ರ ಸಚಿವೆ ಉಮಾಭಾರತಿ ಕರ್ನಾಟಕದ ಪರವಾಗಿರುವುದರಿಂದ ಅವರು ಉಭಯ ರಾಜ್ಯಗಳ ಸಚಿವರ ಸಭೆಯ ನೇತೃತ್ವವಹಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಸುಪ್ರೀಂಕೋರ್ಟ್ ಸಲಹೆಯಂತೆ ಕೇಂದ್ರ ಸರಕಾರ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯ ನೇತೃತ್ವವನ್ನು ಕೇಂದ್ರ ಸಚಿವೆ ಉಮಾಭಾರತಿ ವಹಿಸಿಕೊಳ್ಳುವುದರಿಂದ ಪಕ್ಷಪಾತ ಧೋರಣೆ ಅನುಸರಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.  
 
ಕಳೆದ ಕೆಲ ದಿನಗಳ ಹಿಂದೆ ಸಚಿವೆ ಉಮಾ ಭಾರತಿ ತಮಿಳುನಾಡಿಗೆ ನೀರು ಬಿಡದಿರುವ ಕರ್ನಾಟಕ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ ಎನ್ನುವ ವರದಿಗಳು ಹರಡಿರುವುದರಿಂದ, ಸಭೆಯ ಫಲಿತಾಂಶ ತಮಿಳುನಾಡು ಪರವಾಗಿ ಬರಲಿದೆ ಎನ್ನುವ ಅನುಮಾನ ಎದುರಾಗಿದೆ ಎಂದು ತಿಳಿಸಿದ್ದಾರೆ.  
 
ಕೇಂದ್ರ ಸಚಿವೆ ಉಮಾಭಾರತಿ ಮಧ್ಯಸ್ಥಿಕೆ ವಹಿಸುವ ಬದಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿದಲ್ಲಿ ಒಂದು ಒಳ್ಳೆಯ ಫಲಿತಾಂಶ ಹೊರಬರುತ್ತಿತ್ತು ಎಂದು ಹೇಳಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮೂರು ದಿನಗಳ ಕಾಲ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರಕಾರಕ್ಕೆ ಆದೇಶ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments