Webdunia - Bharat's app for daily news and videos

Install App

ಪೆಟ್ರೋಲ್‌ ದರ ಇಳಿಸಿ: ರಾಜ್ಯಗಳಿಗೆ ಪ್ರಧಾನಿ ಸಲಹೆ

Webdunia
ಬುಧವಾರ, 27 ಏಪ್ರಿಲ್ 2022 (14:43 IST)
ರಾಜ್ಯ ಸರಕಾರಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು. ಈ ಮೂಲಕ ದೇಶದಲ್ಲಿ ಹೆಚ್ಚುತ್ತಿರುವ ಆಹಾರ ಧಾನ್ಯಗಳ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕೊರೊನಾ ವೈರಸ್‌ ನಾಲ್ಕನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಸಿಎಂಗಳ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಕಳೆದ ನವೆಂಬರ್‌ ನಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಸುಂಕ ಕಡಿತಗೊಳಿಸಿತ್ತು. ಅಲ್ಲದೇ ರಾಜ್ಯಗಳು ಸಹ ಬೆಲೆ ಕಡಿಮೆ ಮಾಡಬೇಕು ಎಂದು ಮನವಿ ಮಾಡಿತ್ತು ಎಂದರು.
ಕೇಂದ್ರ ಸರಕಾರದ ಸಲಹೆ ಮೇರೆಗೆ ಕೆಲವು ರಾಜ್ಯ ಸರಕಾರಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಸುಂಕವನ್ನು ಕಡಿತಗೊಳಿಸಿತ್ತು. ಆದರೆ ಪಶ್ಚಿಮ ಬಂಗಾಳ, ಕೇರಳ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್‌ ಸೇರಿದಂತೆ ಹಲವು ರಾಜ್ಯಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಸುಂಕ ಕಡಿತ ಮಾಡಲಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಯೇತರ ಸರಕಾರಗಳನ್ನು ತರಾಟೆಗೆ ತೆಗೆದುಕೊಂಡರು.
ಕೆಲವು ರಾಜ್ಯ ಸರಕಾರಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಬೆಲೆ ಇಳಿಸದೇ ಇರುವುದರಿಂದ ತಮ್ಮದೇ ರಾಜ್ಯದ ಜನತೆಗೆ ಬೆಲೆ ಕಡಿತದ ಲಾಭ ದೊರೆಯದಂತೆ ಮಾಡಿವೆ. ಇದರಿಂದ ಬೆಲೆ ಇಳಿಸಿದ ರಾಜ್ಯಗಳಿಗೆ ವಲಸೆ ಹೋಗುವಂತೆ ಆಗಿದೆ. ಇದರಿಂದ ಅಕ್ಕಪಕ್ಕದ ರಾಜ್ಯಗಳಿಗೆ ತೈಲ ಪೂರೈಕೆಯಲ್ಲಿ ತೊಂದರೆ ಆಗುತ್ತಿದೆ ಎಂದು ಅವರು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments