Select Your Language

Notifications

webdunia
webdunia
webdunia
webdunia

ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಪ್ರಧಾನಮಂತ್ರಿ ಕಚೇರಿ ಸ್ಪಂದಿಸಲಿಲ್ಲ: ಮ್ಯಾಗ್‌ಸೆಸ್ಸೆ ಪ್ರಶಸ್ತಿ ವಿಜೇತ

ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಪ್ರಧಾನಮಂತ್ರಿ ಕಚೇರಿ ಸ್ಪಂದಿಸಲಿಲ್ಲ: ಮ್ಯಾಗ್‌ಸೆಸ್ಸೆ ಪ್ರಶಸ್ತಿ ವಿಜೇತ
ನವದೆಹಲಿ , ಬುಧವಾರ, 29 ಜುಲೈ 2015 (15:27 IST)
ಹರಿಯಾಣಾದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆ ಹೋರಾಟಕ್ಕೆ ಪ್ರಧಾನಮಂತ್ರಿ ಕಚೇರಿ ಬೆಂಬಲಿಸುತ್ತಿಲ್ಲ ಎಂದು ರಾಮನ್ ಮ್ಯಾಗ್‌ಸೆಸ್ಸೆ ಪ್ರಶಸ್ತಿ ವಿಜೇತ ಸಂಜೀವ್ ಚತುರ್ವೇದಿ ಆರೋಪಿಸಿದ್ದಾರೆ.
 
ಮ್ಯಾಗ್‌ಸೆಸ್ಸೆ ಫೌಂಡೇಶನ್‌ನಿಂದ 2015ರ ಮ್ಯಾಗ್‌ಸೆಸ್ಸೆ ಪ್ರಶಸ್ತಿ ಘೋಷಣೆಯಾದ ನಂತರ ಮಾತನಾಡಿದ ಚತುರ್ವೇದಿ, ಭ್ರಷ್ಟಾಚಾರ ಮತ್ತು ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪ್ರಧಾನಮಂತ್ರಿ ಕಚೇರಿ ಹಿಂದೇಟು ಹಾಕುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಅಂಶು ಗುಪ್ತಾ ಅವರಿಗೆ ಕೂಡಾ ಮ್ಯಾಗ್‌ಸೆಸ್ಸೆ ಪ್ರಶಸ್ತಿ ದೊರೆತಿದೆ.
 
ಭ್ರಷ್ಟಾಚಾರ ಮತ್ತು ಭ್ರಷ್ಟ ಅಧಿಕಾರಿಗಳ ಬಗ್ಗೆ ಶೂನ್ಯ ತಾಳ್ಮೆಯನ್ನು ಹೊಂದಿರಬೇಕೇ ಹೊರತು ಪ್ರಾಮಾಣಿಕ ಅಧಿಕಾರಿಗಳ ಬಗ್ಗೆಯಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಏಮ್ಸ್ ಮತ್ತು ಹರಿಯಾಣಾದಲ್ಲಿ ಭ್ರಷ್ಟಾಚಾರದ ವಿರುದ್ಧ ನಾನು ಹೋರಾಡುವಾಗ ಹಲವಾರು ಸುಳ್ಳು ಆರೋಪಗಳನ್ನು ಹರೊರಿಸಲಾಯಿತು
 
ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದಂತೆ ನಾನು ಭ್ರಷ್ಟಾಚಾರ ಮಾಡುವುದಿಲ್ಲ ಇತರರಿಗೆ ಮಾಡಲು ಬಿಡುವುದಿಲ್ಲ ಎನ್ನುವ ಘೋಷಣೆಯನ್ನು ಗಮನದಲ್ಲಿಟ್ಟುಕೊಂಡು ಭ್ರಷ್ಟಾಚಾರದ ವಿರುದ್ಧ ಹೋರಾಡಿರುವುದು ನನ್ನ ತಪ್ಪಾಗಿದೆ. ಪ್ರಧಾನಿ ಕಚೇರಿಯ ಅಧಿಕಾರಿಗಳೇ ಭ್ರಷ್ಟಾಚಾರದ ಬಗ್ಗೆ ಮೌನವಾಗಿದ್ದಾರೆ ಎಂದು ಸಂಜೀವ್ ಚತುರ್ವೇದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

Share this Story:

Follow Webdunia kannada