Select Your Language

Notifications

webdunia
webdunia
webdunia
webdunia

ರೆಸಾರ್ಟ್ ನಲ್ಲಿರುವ ಎಐಎಡಿಎಂಕೆ ಶಾಸಕರ ವಿಚಾರಣೆ ನಡೆಸಿದ ಪೊಲೀಸರು

ರೆಸಾರ್ಟ್ ನಲ್ಲಿರುವ ಎಐಎಡಿಎಂಕೆ ಶಾಸಕರ ವಿಚಾರಣೆ ನಡೆಸಿದ ಪೊಲೀಸರು
Chennai , ಶನಿವಾರ, 11 ಫೆಬ್ರವರಿ 2017 (09:57 IST)
ಚೆನ್ನೈ: ಬಲವಂತವಾಗಿ ಶಶಿಕಲಾ ನಟರಾಜನ್ ಎಐಎಡಿಎಂಕೆ ಶಾಸಕರನ್ನು ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಕೂಡಿ ಹಾಕಿದ್ದಾರೆ. ಅವರಿಗೆ ಯಾವ ಸ್ವಾತಂತ್ರ್ಯವನ್ನೂ ಕೊಟ್ಟಿಲ್ಲ. ಎಂಬಿತ್ಯಾದಿ ಅನುಮಾನಗಳನ್ನು ಪರಿಹರಿಸಲು ಸ್ವತಃ ಪೊಲೀಸರೇ ರೆಸಾರ್ಟ್ ಗೆ ತೆರಳಿದ್ದಾರೆ.

 
ಶಶಿಕಲಾ ಬಲವಂತವಾಗಿ ಕೂಡಿ ಹಾಕಿದ್ದಾರಾ? ಮೊಬೈಲ್ ಕಿತ್ತುಕೊಂಡಿದ್ದಾರೆ. ಟಿವಿ ನೋಡಲು ಬಿಡುತ್ತಿಲ್ಲ ಎಂಬೆಲ್ಲಾ ಆರೋಪಗಳ ಸತ್ಯಾ ಸತ್ಯತೆ ಪರೀಕ್ಷಿಸಲು ಪೊಲೀಸರು ರೆಸಾರ್ಟ್ ಗೆ ಬಂದಿದ್ದಾರೆ. ಶಾಸಕರ ಜತೆ ವಿಚಾರಣೆ ನಡೆಸಿದ್ದಾರೆ.

ಆದರೆ ಇದನ್ನು ವರದಿ ಮಾಡಲು ತೆರಳಿದ ಮಾಧ್ಯಮಗಳ ಮೇಲೆ ರೆಸಾರ್ಟ್ ನ ಸಿಬ್ಬಂದಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಹಲ್ಲೆಗೆ ಮುಂದಾಗಿದ್ದಾರೆ. ಪೊಲೀಸರ ಎದುರೇ ಇಷ್ಟೆಲ್ಲಾ ಅವಾಂತರ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯುಪಿಯಲ್ಲಿಂದು ಮೊದಲ ಹಂತದ ಮತದಾನ