Webdunia - Bharat's app for daily news and videos

Install App

ಎರಡೆಲೆ ಚಿಹ್ನೆ ಲಂಚ ಪ್ರಕರಣ: ಟಿಟಿವಿ ದಿನಕರನ್ ವಿರುದ್ಧ ಚಾರ್ಜ್‌ಶೀಟ್ ದಾಖಲು

Webdunia
ಶುಕ್ರವಾರ, 14 ಜುಲೈ 2017 (18:58 IST)
ಕೇಂದ್ರ ಚುನಾವಣೆ ಆಯೋಗದೊಂದಿಗೆ ಎರಡೆಲೆ ಚಿಹ್ನೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ (ಅಮ್ಮ) ಬಣದ ನಾಯಕ ಟಿಟಿವಿ ದಿನಕರನ್ ಭಾಗಿಯಾಗಿರುವ ಪ್ರಕರಣದಲ್ಲಿ, ಮಧ್ಯವರ್ತಿಯಾಗಿರುವ ಆರೋಪಿಯ ವಿರುದ್ಧ ದೆಹಲಿ ಪೊಲೀಸರು ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ದಾಖಲಿಸಿದ್ದಾರೆ.
 
ಚಾರ್ಜ್‌ಶೀಟ್ ಸಲ್ಲಿಸಿದ ಅಂತಿಮ ವರದಿಯಲ್ಲಿ ದಿನಕರನ್ ಹೆಸರನ್ನು ಸೇರ್ಪಡೆಗೊಳಿಸಿಲ್ಲ.ತನಿಖೆ ಮುಕ್ತಾಯದ ನಂತರ ಪೂರಕ ಚಾರ್ಜ್‌ಶೀಟ್‌ನಲ್ಲಿ ದಿನಕರನ್ ಮತ್ತು ಇತರ ಆರೋಪಿಗಳ ಹೆಸರುಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
 
ಏಪ್ರಿಲ್ 16 ರಂದು ಬಂಧಿಸಲಾಗಿದ್ದ ಸುಕೇಶ್ ಚಂದ್ರಶೇಖರ್ ವಿರುದ್ಧ ಸೆಷನ್ಸ್ ನ್ಯಾಯಾಲಯದಿಂದ ಎರಡು ಬಾರಿ ಜಾಮೀನು ನಿರಾಕರಿಸಲಾಗಿದೆ ಮತ್ತು ದೆಹಲಿ ಹೈಕೋರ್ಟ್ ಕೂಡಾ ಜಾಮೀನು ನಿರಾಕರಿಸಿದೆ. ಜುಲೈ 17 ರಂದು ಸಂಬಂಧಪಟ್ಟ ನ್ಯಾಯಾಧೀಶರ ಮುಂದೆ ವಿಶೇಷ ನ್ಯಾಯಾಧೀಶ ಮನೋಜ್ ಜೈನ್ ಈ ವಿಷಯವನ್ನು ದಾಖಲಿಸಿದ್ದಾರೆ.
 
ವಂಚನೆ, ಮೋಸದ ಉದ್ದೇಶ, ಖೋಟಾ ಭದ್ರತಾ ಪತ್ರಗಳು, ವಂಚನೆಗಾಗಿ ನಕಲಿ ದಾಖಲೆಗಳನ್ನು ಬಳಸಿರುವ ಉದ್ದೇಶ ಕಾನೂನಿನಡಿ ಐಪಿಸಿ ಅಡಿಯಲ್ಲಿ ಆರೋಪ ಪಟ್ಟಿ ದಾಖಲಿಸಲಾಗಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
ಒಂದು ವೇಳೆ, ಆರೋಪಿಗಳು ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದಲ್ಲಿ ಗರಿಷ್ಠ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿದೆ.
 
ಶಶಿಕಲಾ ಬಣಕ್ಕೆ ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿಹ್ನೆಯನ್ನು ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ದಿನಕರನ್ ನಿಂದ ಹಣವನ್ನು ತೆಗೆದುಕೊಂಡಿದ್ದಕ್ಕಾಗಿ ಶ್ರೀ ಚಂದ್ರಶೇಖರ್ ಅವರನ್ನು ಬಂಧಿಸಲಾಯಿತು.
 
ದೆಹಲಿ ಪೊಲೀಸರ ಕ್ರೈಂ ಬ್ರಾಂಚ್ ಪ್ರಕಾರ, ಆರೋಪಿ ಸುಕೇಶ್ ಚಂದ್ರಶೇಖರ್ ರಾಜ್ಯಸಭೆಯ ಸದಸ್ಯರಿಗೆ ನೀಡಲಾಗುವ ನಕಲಿ ಗುರುತಿನ ಪತ್ರವನ್ನು ಕೂಡಾ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments