Webdunia - Bharat's app for daily news and videos

Install App

ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅಗಲಿಕೆಗೆ ರಾಜಕೀಯ ಗಣ್ಯರ ಸಂತಾಪ

Webdunia
ಬುಧವಾರ, 7 ಆಗಸ್ಟ್ 2019 (06:48 IST)
ನವದೆಹಲಿ : ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​​​ ಅವರು ಮಂಗಳವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಗಲಿದ ನಾಯಕಿಗೆ  ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.




‘ಭಾರತೀಯ ರಾಜಕಾರಣದಲ್ಲಿ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ.ಸಾರ್ವಜನಿಕ ಸೇವೆಗಾಗಿ ಮತ್ತು ಬಡವರ ಜೀವನವನ್ನು ಉತ್ತಮಗೊಳಿಸಲು ತನ್ನ ಜೀವನವನ್ನು ಮುಡಿಪಾಗಿಟ್ಟ ಗಮನಾರ್ಹ ನಾಯಕಿಯ ನಿಧನಕ್ಕೆ ಭಾರತ ದುಃಖಿಸುತ್ತಿದೆ.’ ಎಂದು ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.


‘ಆಕೆ ಅತೀ ಚಿಕ್ಕ ವಯಸ್ಸಿನಲ್ಲೇ ಹರಿಯಾಣ ರಾಜ್ಯದಲ್ಲಿ ಸಂಪುಟ ದರ್ಜೆ ಸಚಿವೆ ಆಗಿ ಉತ್ತಮ ಕಾರ್ಯ ನಿರ್ವಹಿಸಸಿದ್ದರು. ಈ ದೇಶದ ಎರಡನೇ ಮಹಿಳಾ ವಿದೇಶಾಂಗ ಸಚಿವೆಯಾಗಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದರು. ಸುಷ್ಮಾ ನಿಧನದಿಂದ ನಮ್ಮ ದೇಶ ಒಬ್ಬ ಧೈರ್ಯವಂತೆ ಹಾಗೂ ಮಾತೃ ಹೃದಯಿ ಹೆಣ್ಣು ಮಗಳನ್ನ ಕಳೆದು ಕೊಂಡಿದ್ದೇವೆ. ಅವರ ನಿದನದಿಂದ ರಾಷ್ಟ್ರಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ' ಎಂದು ಮಾಜಿ ಪ್ರಧಾನಿ ಎಚ್​. ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ.


ಸಿಎಂ ಯಡಿಯೂರಪ್ಪ ಅವರು ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಸುಷ್ಮಾ ಸ್ವರಾಜ್ ಅವರ ಸೇವೆಯನ್ನು ದೇಶ ನೆನಪಿಟ್ಟುಕೊಳ್ಳುತ್ತದೆ. ವಿದೇಶಾಂಗ ಮಂತ್ರಿಯಾಗಿ ಅವರು ಮಾಡಿದ ಕಾರ್ಯ ಎಂದಿಗೂ ನೆನಪಿನಲ್ಲಿ ಉಳಿಯುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.


ಸ್ವಸಾಮಾರ್ಥ್ಯದಿಂದ ರಾಜಕೀಯವಾಗಿ ಎತ್ತರೆತ್ತರಕ್ಕೆ ಬೆಳೆಯುತ್ತಿದ್ದಾಗಲೇ ಅವರ ಬದುಕಿನ ಪಯಣ ಹಠಾತ್ತನೆ ಕೊನೆಗೊಂಡಿದ್ದು ವಿಷಾದನೀಯ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments