Webdunia - Bharat's app for daily news and videos

Install App

ಬಿಎಸ್ ವೈ ಆಪ್ತರ ಮೇಲಿನ ಐಟಿ ದಾಳಿಯಲ್ಲಿ ರಾಜಕೀಯ ವಾಸನೆ ಬರುತ್ತಿದೆ: ಸಿದ್ದರಾಮಯ್ಯ

Webdunia
ಶನಿವಾರ, 9 ಅಕ್ಟೋಬರ್ 2021 (13:50 IST)
ಮೈಸೂರು :  ಐಟಿ ದಾಳಿಯಲ್ಲಿ ರಾಜಕೀಯವಿದೆ ಎಂಬುದು ನನ್ನ ಅನುಮಾನ. ಬಿ.ಎಸ್.ಯಡಿಯೂರಪ್ಪ ವಿಜಯೇಂದ್ರ ಆಪ್ತರನ್ನೇ ಆಯ್ಕೆ ಮಾಡಿಕೊಂಡು ದಾಳಿ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ನನಗಂತು ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿಯೆಂದು ಹೇಳುವುದಿಲ್ಲ. ಹಾಗೇ ಹೇಳುವುದಕ್ಕೂ ಸಾಧ್ಯವಿಲ್ಲ. ಆದರೆ ಈ ಫಲಿತಾಂಶದಿಂದ ಈ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತದೆ. ಜನ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳಿಂದ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸುತ್ತಾರೆ ಎಂದರು.
ಜೆಡಿಎಸ್ ನವರು ಒಳ್ಳೆಯ ಉದ್ದೇಶದಿಂದಂತೂ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದರೆ ಜನ ಬುದ್ದಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದರು.
ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಊಹಾಪೋಹ. ಸೋನಿಯಾ ಗಾಂಧಿಯವರೂ ಕರೆದಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ಆ ಬಗ್ಗೆ ಚರ್ಚೆ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments