Webdunia - Bharat's app for daily news and videos

Install App

ಅಧಿಕಾರದ ಮದ: ತರಕಾರಿ ಮಾರುವ ಆದಿವಾಸಿ ಮಹಿಳೆಯನ್ನು ಒದ್ದ ಬಿಜೆಪಿ ಶಾಸಕ

Webdunia
ಬುಧವಾರ, 18 ಮೇ 2016 (15:33 IST)
ಜನತೆಯಿಂದ ಆಯ್ಕೆಯಾದ ಜನಪ್ರತಿನಿಧಿಗಳೇ ಜನರ ಮೇಲೆ ದೌರ್ಜನ್ಯ ಮೆರೆದ ಹಲವಾರು ರಾಜಕಾರಣಿಗಳನ್ನು ನಾವು ನೋಡಿದ್ದೇವೆ. ಅಂತಹ ಘಟನೆಯೊಂದು ಚತ್ತೀಸ್‌ಗಢ್‌ನ ದಂತೆವಾಡಾ ಜಿಲ್ಲೆಯಿಂದ ವರದಿಯಾಗಿದೆ.
 
ಅಧಿಕಾರದ ಮದದಿಂದ ಮೆರೆಯುತ್ತಿರುವ ಬಿಜೆಪಿ ಶಾಸಕನೊಬ್ಬನ ದೌರ್ಜನ್ಯ ಜಿಲ್ಲೆಯಲ್ಲಿ ಮಿತಿಮೀರಿಹೋಗಿದ್ದು ಇದೀಗ ಶಾಸಕನ ವರ್ತನೆಯ ವಿಡಿಯೋ ವೈರಲ್ ಆಗಿದೆ.
 
ಬಿಜೆಪಿ ಶಾಸಕ ಅಭಿಲಾಷ್ ತಿವಾರಿ, ಆದಿವಾಸಿ ಸಮುದಾಯಕ್ಕೆ ಸೇರಿದ ತರಕಾರಿ ಮಾರಾಟ ಮಾಡುವ ಮಹಿಳೆಯ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಾಗ್ದಾಳಿ ನಡೆಸಿದ್ದಲ್ಲದೇ ಆಕೆ ಮಾರಾಟ ಮಾಡುತ್ತಿದ್ದ ತರಕಾರಿಯನ್ನು ಕಾಲಿನಿಂದ ಒದೆಯುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.  
 
ನಗರದ ಗೀಡಮ್ ಬಡಾವಣೆಯ ಪ್ರದೇಶದ ಪರಿಶೀಲನೆಗೆ ತೆರಳಿದ್ದ ಶಾಸಕ ಅಭಿಲಾಷ್, ರಸ್ತೆ ಬದಿ ತರಕಾರಿ ಮಾರಾಟ ಮಾಡುತ್ತಿದ್ದ ಆದಿವಾಸಿ ಮಹಿಳೆಯರನ್ನು ಕಂಡು ಆಕ್ರೋಶದಿಂದ ತರಕಾರಿಯನ್ನು ಒದ್ದು, ಮಹಿಳೆಯ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.  
 
ಬಿಜೆಪಿ ಶಾಸಕನ ವಿಡಿಯೋ ಇದೀಗ ವೈರಲ್ ಆಗಿದ್ದು, ಹಲವಾರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಭಾರಿ ಟೀಕೆಗಳು ಎದುರಾದ ಹಿನ್ನೆಲೆಯಲ್ಲಿ ಶಾಸಕ ಕ್ಷಮೆಯಾಚಿಸಿದ್ದಾನೆ. ಅಭಿಲಾಷ್ ಮಾಜಿ ಸಚಿವ ವಿಜಯ್ ತಿವಾರಿಯವರ ಪುತ್ರನಾಗಿದ್ದಾನೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

ಮುಂದಿನ ಸುದ್ದಿ
Show comments