Webdunia - Bharat's app for daily news and videos

Install App

ಪರೀಕ್ಷೆ ಮುಂದೂಡಲು ಮಗುವನ್ನೇ ಕೊಂದ ಪಿಯು ವಿದ್ಯಾರ್ಥಿ…?!

Webdunia
ಬುಧವಾರ, 8 ನವೆಂಬರ್ 2017 (15:13 IST)
ನವದೆಹಲಿ: ಗುರುಗ್ರಾಂ ರ್ಯಾನ್ ಇಂಟರ್‌‌ ನ್ಯಾಷನಲ್ ಶಾಲೆಯಲ್ಲಿ ನಡೆದಿದ್ದ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಪಿಯು ವಿದ್ಯಾರ್ಥಿ ಪರೀಕ್ಷೆ ಹಾಗೂ ಪೋಷಕರ ಸಭೆ ಮುಂದೂಡಲು ಬಾಲಕನ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಆರೋಪಿ ವಿದ್ಯಾರ್ಥಿಯನ್ನು ಬಂಧಿಸಿರುವುದಾಗಿ ಸಿಬಿಐ ಹೇಳಿದೆ. 2 ನೇ ತರಗತಿ ಬಾಲಕನ ಹತ್ಯೆಗೆ ಸಂಬಂಧಿಸಿದಂತೆ ಈ ಮೊದಲು ಬಸ್ ಕಂಡಕ್ಟರ್‌ ನನ್ನು ಬಂಧಿಸಲಾಗಿತ್ತು. ಆದರೆ ಕಂಡಕ್ಟರ್ ಈ ಕೊಲೆ ಮಾಡಿಲ್ಲ. 11ನೇ ತರಗತಿ ವಿದ್ಯಾರ್ಥಿ ಪರೀಕ್ಷೆ ಮುಂದೂಡಲು ಈ ಕೃತ್ಯವೆಸಗಿದ್ದಾನೆ ಎಂದು ಸಿಬಿಐ ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಗಳು ವರದಿ ಮಾಡಿವೆ.

ಬಂಧಿತ ವಿದ್ಯಾರ್ಥಿ ಶಾಲೆಗೆ ತನ್ನೊಟ್ಟಿಗೆ ಚಾಕು ತೆಗೆದುಕೊಂಡು ಬರುತ್ತಿದ್ದ. ಕೆಲವೊಮ್ಮೆ ಈತನಿಗೆ ಮಾನಸಿಕ ಚಿಕಿತ್ಸೆಯೂ ಕೊಡಿಸಲಾಗಿದೆ. ತಾನು ತಂದಿದ್ದ ಚಾಕುವಿನಿಂದಲೇ ಬಾಲಕನ ಕತ್ತು ಸೀಳಿ ಶಾಲೆಯ ಬಾತ್‌ ರೂಂನಲ್ಲಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪೊಲೀಸರು ಕೊಲೆಗೆ ಬಳಿಸಿರುವ ಚಾಕುವನ್ನು ವಶಕ್ಕೆ ಪಡೆದಿದ್ದಾರೆ.

ಅಂದಹಾಗೆ ಸೆ.8ರಂದು 2ನೇ ತರಗತಿ ವಿದ್ಯಾರ್ಥಿ ಪ್ರದ್ಯುಮ್ನ ಶವ ಶಾಲೆಯ ಶೌಚಾಲಯದಲ್ಲಿ ಪತ್ತೆಯಾಗಿತ್ತು. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments