Select Your Language

Notifications

webdunia
webdunia
webdunia
webdunia

ಗಾಂಧಿ ಹತ್ಯೆ ಮಾಡಿದ ಗೋಡ್ಸೆಯನ್ನು ದೇಶ ಭಕ್ತ ಎಂದ ಬಿಜೆಪಿ ಸಂಸದೆ

ಗಾಂಧಿ ಹತ್ಯೆ ಮಾಡಿದ ಗೋಡ್ಸೆಯನ್ನು ದೇಶ ಭಕ್ತ ಎಂದ ಬಿಜೆಪಿ ಸಂಸದೆ
ನವದೆಹಲಿ , ಗುರುವಾರ, 28 ನವೆಂಬರ್ 2019 (08:56 IST)
ನವದೆಹಲಿ : ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶ ಭಕ್ತ ಎಂದು ಹೇಳಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೆ ವಿವಾದಕ್ಕೆ ಕಾರಣರಾಗಿದ್ದಾರೆ.



ಲೋಕಸಭೆಯ ಕಲಾಪದ ವೇಳೆ ಡಿಎಂಕೆ ಸಂಸದ ಎ.ರಾಜಾ ಅವರು ವಿಶೇಷ ಭದ್ರತಾ ಪಡೆ (ಎಸ್ ಪಿಜಿ) ತಿದ್ದಪಡೆ ಮಸೂದೆಯ ಕುರಿತು ಚರ್ಚೆ ನಡೆಸುತ್ತಿದ್ದಾಗ  ಗೋಡ್ಸೆ ಮಹಾತ್ಮಾ ಗಾಂಧಿಯನ್ನು ಕೊಲೆ ಮಾಡಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.


ಈ ವೇಳೆ ಮಧ್ಯಪ್ರವೇಶಿಸಿದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ದೇಶಭಕ್ತನ ಉದಾಹರಣೆಯನ್ನು ನೀವು ಈ ಸಂದರ್ಭದಲ್ಲಿ ಕೊಡಬೇಡಿ ಎಂದು ಕಿಡಿಕಾರಿದ್ದಾರೆ. ಅವರ ಈ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸ ಬಿಡಲು ಒಪ್ಪದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತೇ?