Webdunia - Bharat's app for daily news and videos

Install App

ಪ್ರಜ್ವಲ್ ರೇವಣ್ಣ : ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

Webdunia
ಮಂಗಳವಾರ, 19 ಸೆಪ್ಟಂಬರ್ 2023 (10:54 IST)
ನವದೆಹಲಿ : ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಲೋಕಸಭೆಗೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠವು, ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. 

ಅಲ್ಲದೇ ಸಂಸತ್ ಕಲಾಪಕ್ಕೆ ಹಾಜರಾಗಲು ಅವಕಾಶ ನೀಡಿದೆ. ಆದರೆ ಸಂಸತ್ನಿಂದ ಬರುವ ಭತ್ಯೆ ಬಳಕೆ ಮಾಡದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮಧ್ಯಂತರ ತಡೆಯಿಂದ ಪ್ರಜ್ವಲ್ ರೇವಣ್ಣಗೆ ಚುನಾವಣಾ ಸ್ಪರ್ಧೆ ದಾರಿ ಸುಗಮವಾದಂತಾಗಿದೆ. ಹೆಚ್.ಡಿ.ರೇವಣ್ಣ ಪ್ರಕರಣವನ್ನು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸುಪ್ರೀಂ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments