Webdunia - Bharat's app for daily news and videos

Install App

ಶೀಘ್ರದಲ್ಲೇ ಸಮ್ಮಿಶ್ರ ಸರ್ಕಾರ ಪತನ ವಾಗಲಿದೆ ಎಂದ ಪ್ರಕಾಶ್ ಜಾವ್ಡೇಕರ್

Webdunia
ಬುಧವಾರ, 5 ಡಿಸೆಂಬರ್ 2018 (11:48 IST)
ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಭೂಕಂಪನ ಆಗಲಿದೆ. ಶೀಘ್ರದಲ್ಲೇ ಸಮ್ಮಿಶ್ರ ಸರ್ಕಾರ ಪತನ ವಾಗಲಿದೆ ಎಂದು ಮಾನವ ಸಂಪನ್ಮೂಲ ಸಚಿವ, ಕರ್ನಾಟಕ ಚುನಾವಣಾ ಉಸ್ತುವಾರಿಯೂ ಆಗಿದ್ದ ಪ್ರಕಾಶ್ ಜಾವ್ಡೇಕರ್ ಭವಿಷ್ಯ ನುಡಿದಿದ್ದಾರೆ.


ರಾಜಸ್ಥಾನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ‘ಕರ್ನಾಟಕ ರಾಜಕೀಯದಲ್ಲಿ ಯಾವಾಗ ಬೇಕಾದರೂ ಧಮಾಕ ಆಗಬಹುದು. ಈ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಆಗ್ತಿಲ್ಲ. ಹೀಗಾಗಿ ಜೆಡಿಎಸ್-ಕಾಂಗ್ರೆಸ್‍ನಲ್ಲಿ ಧಮಾಕ ಆಗೋದಂತೂ ನಿಶ್ಚಿತವಾಗಿದೆ. ಆದ್ರೆ ಆ ಧಮಾಕ ಯಾವಾಗ ಅಂತ ಯಡಿಯೂರಪ್ಪ ಅಷ್ಟೇ ಹೇಳಬಹುದು’ ಎಂದು ಹೇಳಿದ್ದಾರೆ.


ಅಲ್ಲದೇ ‘ಕರ್ನಾಟಕದಲ್ಲಿ ನಾವೇ ಅತೀ ದೊಡ್ಡ ಪಕ್ಷ, ನಮಗೆ 7 ಶಾಸಕರ ಸಂಖ್ಯೆಯಷ್ಟೇ ಕೊರತೆ ಇದೆ. ಸರ್ಕಾರ ರಚನೆಗೆ ನಮಗೆ 7 ಸ್ಥಾನಗಳಷ್ಟೇ ಬೇಕಾಗಿದೆ. ಇದು ಯಾವಾಗ ಬೇಕಾದ್ರೂ ಆಗಬಹುದು. ಕರ್ನಾಟಕ ಸರ್ಕಾರ ಯಾವಾಗ ಬೇಕಾದ್ರೂ ಬೀಳಬಹುದು. ಮೈತ್ರಿ ಸರ್ಕಾರ ಒಂದು ಅಸ್ಥಿರ ಸರ್ಕಾರವಾಗಿದ್ದು, ಅನಿವಾರ್ಯದ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಇವರ ನಡುವೆ ಯಾವುದೇ ರೀತಿಯ ಹೊಂದಾಣಿಕೆ ಇಲ್ಲ ಅಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments