Webdunia - Bharat's app for daily news and videos

Install App

ಪ್ರಕಾಶ ಪರ್ವ: ನಿತೀಶ್, ಲಾಲು ಜತೆ ಮೋದಿ ವೇದಿಕೆ ಹಂಚಿಕೆ

Webdunia
ಗುರುವಾರ, 5 ಜನವರಿ 2017 (13:59 IST)
ಗುರುಗೋವಿಂದ ಸಿಂಗ್ ಜಿ ಮಹಾರಾಜರ 350ನೇ ಜನ್ಮದಿನಾಚರಣೆ ಪ್ರಯುಕ್ತ ಪಾಟ್ಣಾದಲ್ಲಿಂದು ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ವಿಶೇಷ ಕಾರ್ಯಕ್ರಮದಲ್ಲಿ ತಮ್ಮ ರಾಜಕೀಯವೈರಿಗಳಾದ ಬಿಹಾರ್ ಮುಖ್ಯಮಂತ್ರಿ, ಜೆಡಿ(ಯು) ನಾಯಕ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಜತೆ ಪ್ರಧಾನಿ ಮೋದಿ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. 
ತಾವಿಂದು ಪಾಟ್ಣಾದಲ್ಲಿರುವುದಾಗಿ ಮೋದಿ ಸರಣಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಪ್ರಕಾಶ ಪರ್ವದ ನಿಮಿತ್ತ ವಿಶೇಷ ಅಂಚೆಚೀಟಿಗಳನ್ನವರು ಬಿಡುಗಡೆ ಮಾಡಲಿದ್ದಾರೆ. 
 
10ನೇ ಸಿಖ್ ಗುರು ಗೋವಿಂದ್ ಸಿಂಗ್ ಅವರ ಪ್ರಕಾಶ್ ಪರ್ವ ಆಚರಣೆ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಅವರ ಶೌರ್ಯ, ಸಾಹಸ ಕಥೆಗಳು ಪ್ರತಿ ಭಾರತೀಯನ ಹೃದಯ ಮತ್ತು ಮನಸ್ಸಿನಲ್ಲಿ ಹಾಸುಹೊಕ್ಕಾಗಿದೆ. ಗುರುಗೋವಿಂದರು ತಮ್ಮ ಸಂಪೂರ್ಣ ಜೀವನವನ್ನು ಜನರ ಸೇವೆ, ಸತ್ಯ, ನ್ಯಾಯ, ನಿಷ್ಠೆ ಪರ ಹೋರಾಟಕ್ಕೆ ಮೀಸಲಾಗಿಟ್ಟಿದ್ದರು. 350ನೇ ಪ್ರಕಾಶ ಪರ್ವದಲ್ಲಿ ಭಾಗವಹಿಸಲು ಸಂತೋಷವಾಗುತ್ತಿದೆ,  ಎಂದು ಟ್ವಿಟರ್‌ನಲ್ಲಿ ಬರೆದಿದ್ದಾರೆ. 
 
ಬಿಹಾರ್ ರಾಜ್ಯಪಾಲ ರಾಮ್ ನಾಥ್ ಕೋವಿಂದ, ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ರವಿಶಂಕರ್ ಪ್ರಸಾದ್, ರಾಮ್ ವಿಲಾಸ್ ಪಾಸ್ವಾನ್ ಸೇರಿದಂತೆ ಅನೇಕ ಕೇಂದ್ರ ಸಚಿವರು, ಗಣ್ಯರು ಇಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments