Webdunia - Bharat's app for daily news and videos

Install App

ರೈಲು ನಿಲ್ದಾಣದಿಂದ ಕುಟುಂಬಸ್ಥರೆದುರೇ ಗರ್ಭಿಣಿಯ ಗ್ಯಾಂಗ್‌ರೇಪ್!

Webdunia
ಮಂಗಳವಾರ, 3 ಮೇ 2022 (09:24 IST)
ಅಮರಾವತಿ: ಆಂಧ್ರ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ.

ರೈಲು ನಿಲ್ದಾಣದಲ್ಲಿ ಗರ್ಭಿಣಿ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ವಾಸ್ತವವಾಗಿ, ಪ್ರಕಾಶಂ ಜಿಲ್ಲೆಯ ಯರ್ರಗೊಂಡ ಪ್ರದೇಶದಲ್ಲಿ ವಾಸಿಸುವ ಮಹಿಳೆ ತನ್ನ ಪತಿ ಮತ್ತು ಮಕ್ಕಳೊಂದಿಗೆ ರಾತ್ರಿ ರೈಲು ನಿಲ್ದಾಣ ತಲುಪಿದ್ದಾರೆ.

ರಾತ್ರಿಯಾದ ಕಾರಣ ಅವರಿಗೆ ನಿಲ್ದಾಣದಿಂದ ಹೋಗಲು ಬಸ್ಸು ಸಿಗಲಿಲ್ಲ. ಹೀಗಾಗಿ ರೈಲ್ವೇ ನಿಲ್ದಾಣದಲ್ಲೇ ಮಲಗಿದ್ದಾರೆ. ಹೀಗಿರುವಾಗ ಮೂರು ಕುಡುಕರು ಅವರ ಬಳಿಗೆ ಬಂದಿದ್ದಾರೆ. ಬಳಿಕ ಮಹಿಳೆಯ ಪತಿಗೆ ಸಾಕಷ್ಟು ಥಳಿಸಿದ್ದಾರೆ. ತದನಂತರ ಮೂವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಮಹಿಳೆಯ ಪತಿ ಅಲಾರಾಂ ಒತ್ತಿ ರೈಲ್ವೆ ಪೊಲೀಸರ ಸಹಾಯ ಪಡೆಯಲು ಪ್ರಯತ್ನಿಸಿದರು, ಆದರೆ ಅವರಿಗೆ ಯಾವುದೇ ಸಹಾಯ ಸಿಗಲಿಲ್ಲ. ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಕುಟುಂಬವು ಗುಂಟೂರಿನಿಂದ ಕೃಷ್ಣಾ ಜಿಲ್ಲೆಗೆ ಕೆಲಸ ಹುಡುಕಿಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ದುಷ್ಕರ್ಮಿಗಳು ಪತಿ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಪತ್ನಿ ಮಧ್ಯಪ್ರವೇಶಿಸಿದ್ದು, ಕೋಪಗೊಂಡ ಕಾಮುಕರು ರೇಪಲ್ಲೇ ನಿಲ್ದಾಣದಿಂದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈ ನಿಲ್ದಾಣ ರಾಜ್ಯದ ರಾಜಧಾನಿ ಅಮರಾವತಿಯಿಂದ ಸುಮಾರು 80 ಕಿ.ಮೀ. ದೂರದಲ್ಲಿದೆ. ಹೀಗಾಗಿ ಮಹಿಳೆಯ ಪತಿ ಓಡಿಹೋಗಿ ರೈಲ್ವೇ ಪೊಲೀಸರ ಸಹಾಯ ಪಡೆಯಲು ಪ್ರಯತ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments