Select Your Language

Notifications

webdunia
webdunia
webdunia
webdunia

ಧೂಮಪಾನ ಮಾಡಬೇಡಿ ಎಂದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಕೊಲೆ ಮಾಡಿದರು!

ಧೂಮಪಾನ ಮಾಡಬೇಡಿ ಎಂದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಕೊಲೆ ಮಾಡಿದರು!
ನವದೆಹಲಿ , ಭಾನುವಾರ, 11 ನವೆಂಬರ್ 2018 (09:29 IST)
ನವದೆಹಲಿ: ಧೂಮಪಾನ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪಂಜಾಬ್-ಬಿಹಾರ್ ನಡುವಿನ ಜಲಿಯನ್ ವಾಲಾ ಎಕ್ಸ್ ಪ್ರೆಸ್ ರೈಲಿನಲ್ಲಿ ಗರ್ಭಿಣಿ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ್ದಾನೆ.

ಚಿನತ್ ದೇವಿ (45) ಎಂಬಾಕೆ ಕೊಲೆಯಾದ ದುರ್ದೈವಿ. ಈಕೆ ತನ್ನ ಕುಟುಂಬದವರೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಧೂಮಪಾನ ಮಾಡುತ್ತಿದ್ದ ಸೋನು ಯಾದವ್ ಎಂಬಾತನಿಗೆ ಧೂಮಪಾನ ಮಾಡದಂತೆ ಕೇಳಿಕೊಂಡಿದ್ದಳು.

ಈ ಸಂದರ್ಭದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಈ ಸಂದರ್ಭದಲ್ಲಿ ಸಿಟ್ಟಿಗೆದ್ದ ಸೋನು ಯಾದವ್ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಕ್ಷಣ ಶಹಜಾನ್ ಪುರ ಎಂಬಲ್ಲಿ ರೈಲು ನಿಲ್ಲಿಸಿ ಸಮೀಪದ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯಲಾಯಿತಾದರೂ ಜೀವವುಳಿಸಲಾಗಲಿಲ್ಲ. ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಜಯಂತಿ ಬೇಕಿದ್ದಿದ್ದು ನಿಮಗೇ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ