Publish Date: Sun, 30 Oct 2022 (14:58 IST)
Updated Date: Sun, 30 Oct 2022 (15:07 IST)
ಗಾಂಧಿನಗರ : ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಮೋದಿ ತವರು ಗುಜರಾತ್ನಲ್ಲಿ `ಏಕರೂಪದ ನಾಗರಿಕ ಸಂಹಿತೆ ಜಾರಿ ಸಂಬಂಧ ಬಿಜೆಪಿ ಸರ್ಕಾರ ಮಹತ್ವದ ತೀರ್ಮಾನ ಪ್ರಕಟಿಸಿದೆ.
ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಲುವಾಗಿ ಸವಿಸ್ತಾರ ಅಧ್ಯಯನ ನಡೆಸಲು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸವುದಾಗಿ ಘೋಷಿಸಿದೆ.
ಬಿಜೆಪಿ 2019ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರೋದಾಗಿ ಭರವಸೆ ನೀಡಿತ್ತು.
ಇತ್ತೀಚೆಗೆ ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ಸರ್ಕಾರಗಳೂ ಸಂಹಿತೆ ಜಾರಿಗೊಳಿಸಲು ಸಮಿತಿಗಳನ್ನು ರಚನೆ ಮಾಡಿದ್ದವು. ಈ ರಾಜ್ಯಗಳ ಸಾಲಿಗೆ ಇದೀಗ ಗುಜರಾತ್ ಸಹ ಸೇರ್ಪಡೆಯಾಗಿದೆ.