Webdunia - Bharat's app for daily news and videos

Install App

ಗಂಗಾ ಸಂರಕ್ಷಣಾ ಪ್ರತಿಜ್ಞೆ ತೆಗೆದುಕೊಳ್ಳಲಿರುವ ರಾಷ್ಟ್ರಪತಿ ಕೋವಿಂದ್

Webdunia
ಶನಿವಾರ, 23 ಸೆಪ್ಟಂಬರ್ 2017 (10:18 IST)
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ್ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಹಿಂದೂ ಪುಣ್ಯಕ್ಷೇತ್ರಗಳಾದ ಬದ್ರಿನಾಥ, ಕೇದಾರನಾಥ ಮತ್ತು ಹರಿದ್ವಾರ ದರ್ಶನ ಮಾಡಲಿದ್ದಾರೆ.

ರಾಮನಾಥ್ ಕೋವಿಂದ್ ರಾಷ್ಟ್ರಪತಿಯಾದ ಬಳಿಕ ತೆರಳುತ್ತಿರುವ ಮೊದಲ ರಾಜ್ಯ ಪ್ರವಾಸ ಇದಾಗಿದ್ದು, ಡೆಹರಾಡೂನ್ ನಲ್ಲಿರುವ ಜಾಲಿಗ್ರಾಟ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ರಾಜ್ಯಪಾಲ ಕೆ.ಕೆ.ಪಾಲ್ ಮತ್ತು ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಬರಮಾಡಿಕೊಳ್ಳಲಿದ್ದಾರೆ.

ಮೊದಲು ಹರಿದ್ವಾರಕ್ಕೆ ತೆರಳಲಿರುವ ರಾಷ್ಟ್ರಪತಿ ಕೋವಿಂದ್, ಹರ್ ಕಿ ಪೌರಿ ಘಾಟ್ ಗೆ ತೆರಳಿ ಗಂಗೆಗೆ ಪೂಜೆ ಸಲ್ಲಿಸಲಿದ್ದಾರೆ. ಇದೇವೇಳೆ ಗಂಗಾ ನದಿ ಸಂರಕ್ಷಣಾ ಪ್ರತಿಜ್ಞೆ ತೆಗೆದುಕೊಳ್ಳಲಿದ್ದಾರೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಳಿಕ ಗಂಗಾ ನದಿ ಸಂರಕ್ಷಣಾ ಪ್ರತಿಜ್ಞೆ ತೆಗೆದುಕೊಳ್ಳುತ್ತಿರುವ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ನಂತರ ಹರಿದ್ವಾರದಲ್ಲಿರುವ ಕುಷ್ಠರೋಗಿ ಮತ್ತು ವಿಕಲಚೇತನರಿಗೆ ಆಶ್ರಯ ನೀಡಿರುವ ಸೇವಾ ಕುಂಜ್ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ ಉತ್ತರಾಖಂಡ್ ರಾಜಭವನದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಬಳಿಕ ಕೆದಾರನಾಥ ಮತ್ತು ಬದ್ರಿನಾಥ ಕ್ಷೇತ್ರಕ್ಕೆ ತೆರಳಲಿದ್ದಾರೆ. ಹೀಗಾಗಿ ಡೆಹರಾಡೂನ್ ಜಿಲ್ಲೆಯಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಏರ್ಪಡಿಲಾಗಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

ಮುಂದಿನ ಸುದ್ದಿ
Show comments