Webdunia - Bharat's app for daily news and videos

Install App

ಸಂಸತ್ತಿನಲ್ಲಿ ಅಂಗೀಕಾರ ಬೆನ್ನಲ್ಲೇ ವಕ್ಫ್‌ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂತಿಮ ಮುದ್ರೆ

Sampriya
ಭಾನುವಾರ, 6 ಏಪ್ರಿಲ್ 2025 (09:35 IST)
Photo Courtesy X
ನವದೆಹಲಿ: ಪಾರ್ಲಿಮೆಂಟ್‌ನಲ್ಲಿ ಸುದೀರ್ಘ ಚರ್ಚೆಗೊಳಗಾಗಿ ಅಂಗೀಕಾರಗೊಂಡ ವಕ್ಫ್‌ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ಮುಸ್ಲಿಂ ಲೀಗ್‌, ಯುಪಿಎ ಮೈತ್ರಿಪಕ್ಷಗಳ ಸಂಸದರ ವಿರೊಧದ ನಡುವೆಯೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ರಾತ್ರೋರಾತ್ರಿ ಈ ಮಸೂದೆಗೆ ಅಂಗೀಕಾರ ದೊರಕಿತ್ತು. ಶನಿವಾರ ರಾತ್ರಿ ಮಸೂದೆಗೆ ಮುರ್ಮು ಅವರು ಒಪ್ಪಿಗೆ ನೀಡಿದ್ದು, ಇದು ಈಗ ಕಾಯ್ದೆಯಾಗಿದೆ.
ಇದೇ ವೇಳೆ ರಾಷ್ಟ್ರಪತಿ ಅವರು, ಮುಸಲ್ಮಾನ್ ವಕ್ಫ್ (ಪುನರಾವರ್ತಿತ) ಮಸೂದೆ 2025 ಕ್ಕೆ ಸಹ ಒಪ್ಪಿಗೆ ನೀಡಿದ್ದಾರೆ.

ಲೋಕಸಭೆಯ ಅಂಗೀಕಾರ ಪಡೆದಿರುವ ವಕ್ಫ್‌ (ತಿದ್ದುಪಡಿ) ಮಸೂದೆಗೆ 13 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ನಂತರ ರಾಜ್ಯಸಭೆಯು ಶುಕ್ರವಾರ ನಸುಕಿನ 2.30ಕ್ಕೆ ಅಂಗೀಕಾರ ನೀಡಿತ್ತು. ಮಸೂದೆಯ ಪರವಾಗಿ 128 ಮಂದಿ, ವಿರುದ್ಧವಾಗಿ 95 ಮಂದಿ ಮತ ಚಲಾಯಿಸಿದ್ದರು.

ವಕ್ಫ್‌ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಬಾರದು ಎಂದು ಮುಸ್ಲಿಂ ಲೀಗ್‌ನ ಐವರು ಸಂಸದರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶನಿವಾರ ಒತ್ತಾಯಿಸಿದ್ದರು. ಅಸಾಂವಿಧಾನಿಕವಾದ ಈ ಮಸೂದೆಯು ಜಾರಿಗೆ ಬರುವುದನ್ನು ತಡೆಯಬೇಕು ಎಂದು ಅವರು ಕೋರಿದ್ದರು. ಅದರ ಬೆನ್ನಲ್ಲೇ ರಾಷ್ಟ್ರಪತಿ ಮಸೂದೆಗೆ ಅಂತಿಮ ಮುದ್ರೆ ಒತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments