Webdunia - Bharat's app for daily news and videos

Install App

ಜೀವರಕ್ಷಕರಿಗೆ ಕಾನೂನಿನ ರಕ್ಷಣೆ ನೀಡುವ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

Webdunia
ಸೋಮವಾರ, 1 ಅಕ್ಟೋಬರ್ 2018 (14:09 IST)
ನವದೆಹಲಿ : ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ದೊರೆಯುವಂತೆ ಮಾಡುವವರು ಇನ್ಮುಂದೆ ಪೊಲೀಸರು ಅಥವಾ ತನಿಖೆಗೆ ಹೆದರಬೇಕಾಗಿಲ್ಲ.


ಹೌದು. ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವ ರಾಜ್ಯದ ಜೀವರಕ್ಷಕರಿಗೆ ಇನ್ಮುಂದೆ ಕಾನೂನಿನ ರಕ್ಷಣೆ ನೀಡುವ ಮತ್ತು ಅನಗತ್ಯ ಕಿರಿಕಿರಿಗಳಿಂದ ಅವರಿಗೆ ಮುಕ್ತಿ ಕಲ್ಪಿಸುವ ಕರ್ನಾಟಕ ವಿಶೇಷ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.


ಇಂತಹ ಕಾನೂನು ಜಾರಿ ಮಾಡಿದ ಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಈ ಕಾಯ್ದೆಯ ಪ್ರಕಾರ ಸಕಾಲದಲ್ಲಿ ಗಾಯಾಳುಗಳಿಗೆ ನೆರವು ನೀಡಿದವರಿಗೆ ಕರ್ನಾಟಕ ಸರ್ಕಾರ ಆರ್ಥಿಕ ನೆರವನ್ನೂ ಒದಗಿಸಲಿದೆ. ಒಂದು ವೇಳೆ ಗಾಯಾಳುಗಳಿಗೆ ನೆರವಾಗುವವರು ಕೋರ್ಟ್ ಅಥವಾ ಪೊಲೀಸ್ ಠಾಣೆಗೆ ಹಾಜರಾಗುವ ಅನಿವಾರ್ಯತೆ ಬಂದರೆ ಅವರ ಖರ್ಚು ವೆಚ್ಚ ಭರಿಸಲಾಗುತ್ತದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ನೆರವು ನೀಡಿದವರು ತಕ್ಷಣವೇ ನಿರ್ಗಮಿಸಬಹುದು, ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆ ವೈದ್ಯರು ಗಾಯಾಳುಗಳನ್ನು ದಾಖಲಿಸಿಕೊಂಡು ಪ್ರಥಮ ಚಿಕಿತ್ಸೆ ಕೊಡುವುದು ಕಡ್ಡಾಯ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments