Webdunia - Bharat's app for daily news and videos

Install App

ಮನಮೋಹನ್ ಸಿಂಗ್ ದೇಶ ಬದ್ಧತೆಯನ್ನು ಪ್ರಧಾನಿ ಪ್ರಶ್ನಿಸಿಲ್ಲ- ಅರುಣ್ ಜೇಟ್ಲಿ

Webdunia
ಬುಧವಾರ, 27 ಡಿಸೆಂಬರ್ 2017 (21:00 IST)
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ದೇಶ ಬದ್ಧತೆಯನ್ನು ನರೇಂದ್ರ ಮೋದಿ ಅವರು ಪ್ರಶ್ನಿಸಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿದ ಅರುಣ್ ಜೇಟ್ಲಿ ಅವರು ಗುಜರಾತ್ ಚುನಾವಣೆ ಪ್ರಚಾರದ ವೇಳೆ ನರೇಂದ್ರ ಮೋದಿ ಅವರು ಮನಮೋಹನ್ ಸಿಂಗ್ ಮತ್ತು ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ದೇಶ ಬದ್ಧತೆಯನ್ನು ಪ್ರಶ್ನಿಸಿಲ್ಲ, ಪ್ರಶ್ನಿಸುವ ಉದ್ದೇಶ ಹೊಂದಿರಲಿಲ್ಲ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಹೇಳಿಕೆ ಸಂಬಂಧಿಸಿ ಸಂಸತ್ ನ ಉಭಯ ಸದನಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಆದ್ದರಿಂದ ಅರುಣ್ ಜೇಟ್ಲಿ ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಅರುಣ್ ಜೇಟ್ಲಿ ಹೇಳಿಕೆಯನ್ನು ಕಾಂಗ್ರೆಸ್ ಸ್ವಾಗತಿಸಿದ್ದು, ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ.
ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಮೋದಿ ಹೇಳಿಕೆಗೆ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಪಟ್ಟುಹಿಡಿದಿತ್ತು. ಕ್ಷಮೆ ಕೇಳಬೇಕು ಎಂದೂ ಆಗ್ರಹಿಸಿತ್ತು. ಇದರಿಂದ ಒಂದು ವಾರದಿಂದ ಕಲಾಪಕ್ಕೆ ಅಡ್ಡಿಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments