Webdunia - Bharat's app for daily news and videos

Install App

ಕಾಂಗ್ರೆಸ್‌ ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್‌ಗೆ ಮತ್ತೊಂದು ಟಾಸ್‌ ನೀಡಿದ ಪ್ರಧಾನಿ ನರೇಂದ್ರ ಮೋದಿ

Sampriya
ಶನಿವಾರ, 21 ಜೂನ್ 2025 (14:36 IST)
Photo Credit X
ನವದೆಹಲಿ: ಈಗಾಗಲೇ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಸಂಸದ ಶಶಿ ತರೂರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಟಾಸ್ಕ್‌ ನೀಡಿದ್ದಾರೆ. 

ಭಾರತ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗ ಇದೀಗ ರಷ್ಯಾದತ್ತ ಮುಖ ಮಾಡಿದೆ.

ಮೊದಲ ಸುತ್ತಿನ ಟಾಸ್ಕ್‌ ಮುಗಿಸಿರುವ ಶಶಿ ತರೂರು ನಾಯಕತ್ವದ ನಿಯೋಗವನ್ನು ರಷ್ಯಾ, ಬ್ರಿಟನ್ ಮತ್ತು ಗ್ರೀಸ್‌ನಂತಹ ದೇಶಗಳಿಗೆ ಎರಡನೇ ಸುತ್ತಿನ ರಾಜತಾಂತ್ರಿಕ ಸಂಪರ್ಕಕ್ಕೆ ನಿಯೋಜಿಸಲಾಗಿದೆ.

ತರೂರ್ ನಿಯೋಗವು ವಿವಿಧ ದೇಶಗಳಲ್ಲಿನ ಭಾರತೀಯ ರಾಜತಾಂತ್ರಿಕ ಕಾರ್ಯಾಚರಣೆಗಳೊಂದಿಗೆ ಸಂಪರ್ಕ ಸಾಧಿಸಲಿದ್ದಾರೆ. ಅಮೆರಿಕ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಮೃದುವಾಗುತ್ತಿರುವ ಹಿನ್ನೆಲೆಯಲ್ಲಿ ಅವರ ರಷ್ಯಾ ಭೇಟಿ ಮಹತ್ವ ಪಡೆದುಕೊಂಡಿದೆ.

ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಇತ್ತೀಚೆಗೆ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಮುಖಾಮುಖಿ ಸಭೆ ನಡೆಸಿದ ನಂತರ ಭಾರತದ ಈ ಕ್ರಮ ಕುತೂಹಲ ಕೆರಳಿಸಿದೆ. 

ತರೂರ್ ನೇತೃತ್ವದ ತಂಡವು ಅಮೆರಿಕಕ್ಕೂ ಭೇಟಿ ನೀಡಿದ್ದು, ಅಲ್ಲಿ ಅವರು ಉಪಾಧ್ಯಕ್ಷ ಜೆ. ಡಿ. ವ್ಯಾನ್ಸ್ ಮತ್ತು ವಿದೇಶಾಂಗ ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಅವರನ್ನು ಭೇಟಿ ಮಾಡಿದ್ದಾರೆ. ಲ್ಯಾಂಡೌ ಅವರೊಂದಿಗಿನ ಭೇಟಿಯ ಸಮಯದಲ್ಲಿ, ತರೂರ್ ನೇತೃತ್ವದ ನಿಯೋಗವು ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಅವರಿಗೆ ಸ್ಪಷ್ಟವಾಗಿ ವಿವರಿಸಿದೆ.

ಮೋದಿ ಅವರು ಕಳೆದ ಮಂಗಳವಾರ ತರೂರ್ ಮತ್ತು ಆಪರೇಷನ್ ಸಿಂದೂರ್‌ನ ಸರ್ವಪಕ್ಷ ನಿಯೋಗದ ಎಲ್ಲಾ ಇತರ ಸದಸ್ಯರನ್ನು ಅವರ ನಿವಾಸ, 7 ಲೋಕ ಕಲ್ಯಾಣ್ ಮಾರ್ಗದಲ್ಲಿ ಭೇಟಿಯಾದರೂ, ಮರುದಿನ ಸಂಜೆ ಪ್ರಧಾನಿ ಮೋದಿ ಶಶಿ ತರೂರ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments